ಬಂಟ್ವಾಳ

ಜೋಡುಮಾರ್ಗ ಜೇಸಿಯಿಂದ ಸಿಎಪಿಪಿ ಕಾರ್ಯಾಗಾರ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಜೋಡುಮಾರ್ಗ ನೇತ್ರಾವತಿ ಜೇಸಿ ವತಿಯಿಂದ ಜೇಸಿ ವಲಯ ಮಟ್ಟದ ಚೇರ್‍ಮನ್‌ಶಿಪ್ ಮತ್ತು ಪಾರ್ಲಿಮೆಂಟರಿ ಪ್ರೊಸೀಜರ್‍ಸ್ – ಸಿಎಪಿಪಿ 2018 ಎಂಬ ನಿರ್ವಹಣೆ ಕುರಿತ ಕಾರ್ಯಾಗಾರ ಬಿ.ಸಿ.ರೋಡಿನ ರೋಟರಿ ಹಾಲ್ ನಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮವನ್ನು ಜೇಸಿ೧೫ರ ವಲಯಾಧ್ಯಕ್ಷ ರಾಕೇಶ್ ಕುಂಜೂರು ಉದ್ಘಾಟಿಸಿ ಮಾತನಾಡಿ, ಇಂದು ನಾಯಕನಾದವನಿಗೆ ಒದಗಿಸಬೇಕಾದ ತರಬೇತಿಯ ಅಂಶಗಳನ್ನು ನೀಡುವ ಸಂಸ್ಥೆ ಎಂದೇ ಪ್ರಸಿದ್ಧಿ ಪಡೆದಿರುವ ಜೇಸಿಯ ಮೂಲತತ್ವವೇ ತರಬೇತಿ. ಈ ಕಾರ್ಯಕ್ರಮಕ್ಕೆ ಬರುವ ಆಸಕ್ತರ ಸಂಖ್ಯೆ ವೃದ್ಧಿಯಾಗುತ್ತಿರುವುದು ಸಂತಸದ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರೋಟರಿ ಜಿಲ್ಲೆ ೩೧೮೧ರ ವಲಯ ನಾಲ್ಕರ ಸಹಾಯಕ ಗವರ್ನರ್ ಪ್ರಕಾಶ್ ಕಾರಂತ ಮಾತನಾಡಿ, ಇನ್ನೊಬ್ಬರನ್ನು ಆಲಿಸುವುದು ಹಾಗೂ ಹೊಸ ವಿಚಾರಗಳ ಅರಿವನ್ನು ಪಡೆಯುವುದು ನಾಯಕತ್ವದ ಪ್ರಮುಖ ಲಕ್ಷಣ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಜೇಸಿ ವಲಯ ಉಪಾಧ್ಯಕ್ಷ ಪಶುಪತಿ ಶರ್ಮ, ತರಬೇತಿ ವಿಭಾಗದ ವಲಯ ನಿರ್ದೇಶಕ ಧೀರೇಂದ್ರ ಜೈನ್, ಜಿಲ್ಲೆಯ ತರಬೇತಿ ವಿಭಾಗದ ತೀರ್ಥಾನಂದ, ಕಾರ್ಯಕ್ರಮದ ತರಬೇತುದಾರರಾದ ಶ್ರೀಧರ ಪಿ.ಎಸ್, ರಾಜೇಶ್ ಶೆಣೈ ಜೇಸಿರೇಟ್ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಉಪಸ್ಥಿತರಿದ್ದರು. ಜೋಡುಮಾರ್ಗ ಜೇಸಿ ಪೂರ್ವಾಧ್ಯಕ್ಷ ಅಹ್ಮದ್ ಮುಸ್ತಾಫ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಂಡರು. ಜೋಡುಮಾರ್ಗ ಜೇಸಿ ಉಪಾಧ್ಯಕ್ಷ ಹರಿಪ್ರಸಾದ್ ಕುಲಾಲ್ ಜೇಸಿವಾಣಿ ವಾಚಿಸಿದರು. ಜೋಡುಮಾರ್ಗ ಜೇಸಿ ಅಧ್ಯಕ್ಷೆ ಸವಿತಾ ನಿರ್ಮಲ್ ಸ್ವಾಗತಿಸಿದರು. ಪೂರ್ವಾಧ್ಯಕ್ಷ ಕೃಷ್ಣರಾಜ ಭಟ್, ಕಾರ್ಯಕ್ರಮ ನಿರ್ದೇಶಕರಾದ ಧೀರಜ್ ಎಚ್, ಜಯರಾಜ್ ಎಸ್. ಬಂಗೇರ ಜೋಡುಮಾರ್ಗ ಜೇಸಿ ನಿರ್ದೇಶಕ ಹರೀಶ್ ಮಾಂಬಾಡಿ ಅತಿಥಿಗಳನ್ನು ಪರಿಚಯಿಸಿದರು. ಜೋಡುಮಾರ್ಗ ಜೇಸಿ ಕಾರ್ಯದರ್ಶಿ ಹರ್ಷರಾಜ್ ಸಿ. ವಂದಿಸಿದರು. ಬಳಿಕ ತರಬೇತಿ ಕಾರ್ಯಕ್ರಮ ನಡೆಯಿತು. ದ.ಕ ಮತ್ತು ಉಡುಪಿ ಜಿಲ್ಲೆಗಳಿಂದ 90ಕ್ಕೂ ಅಧಿಕ ಜೇಸಿ ಸದಸ್ಯರು ಕಾರ್ಯಾಗಾರದಲ್ಲಿ ಪಾಲ್ಗೊಂಡರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

15 hours ago