ಅಪರಾಧ ಚಟುವಟಿಕೆ ನಿಯಂತ್ರಣದಲ್ಲಿ: ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್

ಸದ್ಯಕ್ಕಂತೂ ಬಂಟ್ವಾಳ ತಾಲೂಕಿನಲ್ಲಿ ಅಪರಾಧ ಚಟುವಟಿಕೆ ನಿಯಂತ್ರಣದಲ್ಲಿದೆ, ಇದು ಹೀಗೆಯೇ ಮುಂದುವರಿಯಲು ಇಲಾಖೆಯೊಂದಿಗೆ ಸಹಕರಿಸಿ ಎಂದು ಸಾರ್ವಜನಿಕರಿಗೆ ಬಂಟ್ವಾಳ ವೃತ್ತನಿರೀಕ್ಷಕ ಪ್ರಕಾಶ್ ಮನವಿ ಮಾಡಿದ್ದಾರೆ.

ಜಾಹೀರಾತು

ಬಂಟ್ವಾಳ ಶ್ರಿ ತಿರುಮಲ ವೆಂಕಟರಮಣ ದೇವಳದ ಸಭಾಂಗಣದಲ್ಲಿ ಬಿ.ಕಸ್ಬಾ ಗ್ರಾಮದ ಪೊಲೀಸ್ ಬೀಟ್ ಸಭೆಯಲ್ಲಿ ಅವರು ಮಾತನಾಡಿದರು.

ಬಂಟ್ವಾಳದಲ್ಲಿ ಶಾಂತಿಯ ವಾತಾವರಣ ಈಗಿದ್ದು, ಇದಕ್ಕೆ ಸಾರ್ವಜನಿಕರ ಕೊಡುಗೆ ಬಹಳ ಮುಖ್ಯವಾಗಿದೆ ಎಂದ ಅವರು, ಹಾಗೆಂದು ಎಚ್ಚರಿಕೆಯಿಂದ ಇರುವುದೂ ಮುಖ್ಯ. ನಗರ ವ್ಯಾಪ್ತಿಯಲ್ಲಿ  ಎಲ್ಲಾ ಅಂಗಡಿ ಮುಂಗಟ್ಟು,ದೇವಸ್ಥಾನಗಳಿಗೂ ಕಾವಲುಗಾರನನ್ನು ನೇಮಿಸಿ ಸುರಕ್ಷತೆಯನ್ನು ಕಾಪಾಡಿಕೊಳ್ಳುತ್ತಿರುವುದು ಶ್ಲಾಘನೀಯ. ನಾಗರಿಕರು ಮನೆ ಬಿಟ್ಟು ದೂರ ಹೋಗುವ ಸಂದರ್ಭ ನಗದು, ಒಡವೆಯನ್ನು ಬ್ಯಾಂಕ್ ಲಾಕರ್ ನಲ್ಲಿರಿಸಬೇಕು, ಯಾವುದೇ ಅವಘಡಗಳು ಸಂಭವಿಸಿದಾಗ ಅಥವಾ ಮನೆಗೆ ಬೀಗ ಹಾಕಿ ದೂರದೂರಿಗೆ ಪ್ರವಾಸ ಮಾಡುವಾಗ ತಮ್ಮ ಗ್ರಾಮದ  ಬೀಟ್ ಪೊಲೀಸ್  ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದರು.

ಮುಂದಿನ ತಿಂಗಳು ರಾಜ್ಯ ವಿಧಾನಸಭೆಗೆ ಚುನಾವಣೆಯು ನಡೆಯಲಿದ್ದು, ಆರ್ಹತೆ ಹೊಂದಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ಕರೆ ನೀಡಿದರು. ಚುನಾವಣಾ ಸಂದರ್ಭ ಯಾವುದೇ  ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನಾಗರಿಕರು ಪೊಲೀಸ್ ಇಲಾಖೆಯೊಂದಿಗೆ  ಕೈ ಜೋಡಿಸಬೇಕು ಎಂದು ತಿಳಿಸಿದರು. ‌

ಜಾಹೀರಾತು

ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಚಂದ್ರಶೇಖರ್ ಮಾತನಾಡಿ, ಬೀಟ್ ಸಿಬ್ಬಂದಿಗೆ ಹೆಚ್ಚುವರಿ‌ ಗ್ರಾಮಗಳನ್ನು  ಹಂಚಿಕೆ ಮಾಡಲಾಗಿದೆ. ಗ್ರಾಮದಲ್ಲಾಗುವ ಪ್ರತಿಯೊಂದು ಅಗು-ಹೋಗುಗಳ ಕುರಿತ ಮಾಹಿತಿಯನ್ನು ಬೀಟ್ ಪೊಲೀಸರಿಗೆ ನೀಡಿದಾಗ ಜನರ ಗ್ರಾಮದಲ್ಲಿ ಶಾಂತಿ ,ಸೌಹಾರ್ದತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದರು.

ಮೇ ತಿಂಗಳಲ್ಲಿ   ನಡೆಯುವ ಚುನಾವಣೆಯಲ್ಲಿ ಮತದಾರರು ರಾಜಕೀಯ ಪಕ್ಷಗಳ ನಾಯಕರ ಒತ್ತಡ,ಅಮೀಷಕ್ಕೊಳಗಾಗದೆ ಸ್ವಯಂ ಪ್ರೇರಿತವಾಗಿ ಮತಚಲಾಯಿಸಬೇಕು, ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಬಗ್ಗೆ ಮತ ಚಲಾಯಿಸಲು ಆಸಕ್ತಿ ಇಲ್ಲ ಎಂದಾದರೆ ನೋಟಾ ಮತ ಚಲಾವಣೆಗೂ ಅವಕಾಶವಿದ್ದು,ಒಟ್ಟಾರೆ ಮತದಾರ ತಮ್ಮ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದರು.

ಅಪರಾಧ ವಿಭಾಗದ ಎಸ್.ಐ.ಹರೀಶ್ ಉಪಸ್ಥಿತರಿದ್ದರು.ಪುರಸಭೆಯ ನಾಮನಿರ್ದೇಶಿತ ಸದಸ್ಯ ಪ್ರವೀಣ್ ಕಿಣಿ, ಉದ್ಯಮಿ ಸುರೇಶ್ ಬಾಳಿಗ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಬೀಟ್ ಸಿಬ್ಬಂದಿಗಳಾದ ಮುರುಗೇಶ್,  ಕೃಷ್ಣ,  ಸುರೇಶ್, ವಿಶಾಲಾಕ್ಷೀ, ಧನ್ಯಶ್ರೀ ಮತ್ತು ರಾಘವೇಂದ್ರ ಸಹಕರಿಸಿದ್ದರು. ಮತನಾದ ಜಾಗೃತಿ ಕರಪತ್ರಗಳನ್ನು ಈ ಸಂದರ್ಭ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಪರಾಧ ಚಟುವಟಿಕೆ ನಿಯಂತ್ರಣದಲ್ಲಿ: ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*