ಬಂಟ್ವಾಳ

ಬಂಟ್ವಾಳಕ್ಕೆ ವೈ.ರವಿ ನೂತನ ತಹಶೀಲ್ದಾರ್

ಬಂಟ್ವಾಳ ತಾಲೂಕಿನ ತಹಶೀಲ್ದಾರ್ ಹುದ್ದೆಯಲ್ಲಿ ಮತ್ತೆ ಬದಲಾವಣೆ ಆಗಿದೆ. ಈ ಹಿಂದೆ ಇದ್ದ ಪುರಂದರ ಹೆಗ್ಡೆ ಅವರನ್ನು ಬೈಂದೂರಿಗೆ ವರ್ಗಾವಣೆ ಮಾಡಿದ ನಂತರ ಪ್ರಭಾರ ನೆಲೆಯಲ್ಲಿ ಜೀನ್ ಮೇರಿ ತಾವ್ರೋ ಅವರನ್ನು ನಿಯುಕ್ತಿಗೊಳಿಸಲಾಗಿತ್ತು. ಆದರೆ ಈಗ ವೈ. ರವಿ ಅವರು ನೂತನ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

ಜಾಹೀರಾತು

ಕೋಲಾರ ಜಿಲ್ಲೆಯವರಾದ ವೈ.ರವಿ ಅಧಿಕಾರ ಸ್ವೀಕರಿಸಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಿರ್ಭೀತಿಯಿಂದ ನಡೆಸುವುದೇ ಮೊದಲ ಆದ್ಯತೆ, ಮತಗಟ್ಟೆಗೆ ಎಲ್ಲ ಮತದಾರರು, ವಿಶೇಷವಾಗಿ ವಿಕಲಚೇತನರೂ ಆಗಮಿಸುವಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಈ ಸಂದರ್ಭ ಅವರು ತಿಳಿಸಿದರು.

ನೂತನ ತಹಶೀಲ್ದಾರ್ ಅವರನ್ನು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ವತಿಯಿಂದ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಉಪತಹಶೀಲ್ದಾರ್ ಗಳಾದ ಎ ಪ್ರಕಾಶ್, ರಾಜೇಶ್  ನಾಯ್ಕ್, ಗ್ರೆಟ್ಟಾ ಮಸ್ಕರೇಂಜಸ್, ಸೀತಾರಾಮ, ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ, ರಾಮ ಕಾಟಿಪಳ್ಳ, ನವೀನ್ ಬೆಂಜನಪದವು ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ