ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಇವಿಎಂ ಮತಯಂತ್ರ ಮತ್ತು ಮತದಾನ ದೃಢೀಕರಣದ ವಿವಿ ಪ್ಯಾಟ್ ಯಂತ್ರಗಳ ಉಪಯೋಗ ಕುರಿತು ಪ್ರಾತ್ಯಕ್ಷಿಕೆ ನಡೆಯಿತು.
ಬಂಟ್ವಾಳ ಮೂಡ ಗ್ರಾಮ ಹಲವು ಬೂತ್ ಗಳಲ್ಲಿ ಈ ಪ್ರಾತ್ಯಕ್ಷಿಕೆಯನ್ನು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಾಗೂ ಚುನಾವಣೆ ಸಂಬಂಧಿಸಿದ ಅಧಿಕಾರಿ ಅರುಣ್ ಪ್ರಕಾಶ್ ನೀಡಿದರು. ಮತಯಂತ್ರದ ಗುಂಡಿ ಒತ್ತಿದೊಡನೆ ಇನ್ಯಾವುದಕ್ಕೋ ಹೋಗುವುದಿಲ್ಲ, ಬದಲಾಗಿ ಯಾವ ಚಿಹ್ನೆಗೆ ಒತ್ತಲಾಗಿದೆಯೋ ಅದಕ್ಕೇ ಅಚ್ಚಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ಅಧಿಕಾರಿ ವಿವರಿಸಿದರು. ಈ ಸಂದರ್ಭ ಎಪಿಎಂಸಿ ಕೇಂದ್ರದಲ್ಲಿ ಪುರಸಭಾ ಸದಸ್ಯೆ ಸುಗುಣ ಕಿಣಿ, ಪುರಸಭಾ ನಾಮನಿರ್ದೇಶಿತ ಸದಸ್ಯ ಲೋಕೇಶ ಸುವರ್ಣ, ಅಂಗನವಾಡಿ ಕಾರ್ಯಕರ್ತೆ ಶ್ರೀವಾಣಿ ರಾವ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…