ಬಂಟ್ವಾಳ

ಶಂಬೂರಿನಲ್ಲಿ ಜೋಡುಮಾರ್ಗ ಜೇಸೀಯ ಯುವ ಜೇಸೀ ಉದ್ಘಾಟನೆ

ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುನಃಚೇತನ ತರಬೇತಿ ಮತ್ತು ಯುವ ಜೇಸಿ ವಿಭಾಗವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಉದ್ಘಾಟಿಸಿದರು.

ಜಾಹೀರಾತು

ತರಬೇತಿ ನೀಡಿದ ಜೇಸಿ ವಲಯ ಉಪಾಧ್ಯಕ್ಷ ಪಶುಪತಿ ಶರ್ಮ, ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ದೇಶದ ಉತ್ತಮ ಪ್ರಜೆಯನ್ನಾಗಿ ತಯಾರು ಮಾಡುವ ಕೆಲಸ ಜೇಸೀ ಸಂಸ್ಥೆ ಮಾಡುತ್ತಿದೆ ಎಂದರು.

ಶಾಲಾ ಮುಖ್ಯ ಶಿಕ್ಷಕ ರಾದ ಕಮಲಾಕ್ಷ ಕಲ್ಲಡ್ಕ, ಜೇಸೀ ಉಪಾಧ್ಯಕ್ಷರಾದ ಜಯರಾಜ್ ಬಂಗೇರ, ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಕಾರ್ಯದರ್ಶಿ ಹರ್ಷರಾಜ್ ಉಪಸ್ತಿತರಿದ್ದರು.

ನೂತನ ಯುವ ಜೇಸಿ ಅಧ್ಯಕ್ಷರಾಗಿ ದಿವ್ಯ, ಕಾರ್ಯದರ್ಶಿ ಯಾಗಿ ಶುಭಶ್ರೀ, ಜೊತೆ ಕಾರ್ಯದರ್ಶಿ ಯಾಗಿ ಜ್ಯೋತಿಕಾ ಹಾಗೂ ತರಬೇತಿ ವಿಭಾಗದ ಉಪಾಧ್ಯಕ್ಷೆ ಜಯಶ್ರೀ, ಸಮುದಾಯ ಅಭಿವೃದ್ಧಿ ವಿಭಾಗದ ಉಪಾಧ್ಯಕ್ಷೆ ಪ್ರಜ್ಞಾ, ಕಾರ್ಯ ಕ್ರಮ ವಿಭಾಗದ ಉಪಾಧ್ಯಕ್ಷೆ ಸುರಕ್ಷಾ, ವ್ಯವಹಾರ ವಿಭಾಗದ ಉಪಾಧ್ಯಕ್ಷೆ ಪಾವನ ಹಾಗೂ ಘಟಕಾಡಳಿತ ವಿಭಾಗದ ಉಪಾಧ್ಯಕ್ಷ ರಾಗಿ ಧನ್ಯ ಬಿ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮ ಅಧ್ಯಕ್ಷತೆಯ ನ್ನು ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ವಹಿಸಿದ್ದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ಸಂಯೋಜಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ