ಬಂಟ್ವಾಳ

ವಾಹನ ಡಿಕ್ಕಿ: ದ್ವಿಚಕ್ರ ಸವಾರ ಗಾಯ

ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನ ಸವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪೆಲತ್ತಕಟ್ಟೆ ಎಂಬಲ್ಲಿ ಘಟನೆ ನಡೆದಿದೆ. ಸಜೀಪ ನಿವಾಸಿ ರೋಹಿತ್ ಗಾಯಗೊಂಡ ವರು. ಇವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ವಾಹನ ಚಾಲಕ ಹಂಝ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಜಾಹೀರಾತು

ರೋಹಿತ್ ಕೆಲಸ ಮುಗಿಸಿ ಸಜೀಪ ಮನೆಗೆ ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆ ಎಂಬಲ್ಲಿ ಅತಿಯಾದ ವೇಗದಿಂದ ಬಂದ ಟೆಂಪೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗುಲು ಮುಂದಾದಾಗ ಸ್ಥಳೀಯರು ವಾಹನ ವನ್ನು ತಡೆದು ನಿಲ್ಲಿಸಿ ನೋಡಿದಾಗ ಅದರಲ್ಲಿ ಅಕ್ರಮ ವಾಗಿ ಎರಡು ದನಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಮತ್ತು ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ