ವಿಟ್ಲ

ಪೊಲೀಸರಿಗೆ ಕಿಡಿಗೇಡಿಗಳಿಂದ ಮುತ್ತಿಗೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ವ್ಯಕ್ತಿಯೊಬ್ಬನಿಗೆ ತಂಡವೊಂದು ಬೇಡಗುಡ್ಡೆಯಲ್ಲಿ ಹಲ್ಲೆ ನಡೆಸಿದ ಮಾಹಿತಿ ಪಡೆದ ವಿಟ್ಲ ಪೊಲೀಸರು ಸ್ಥಳಕ್ಕೆ ಹೋಗುವ ಸಂದರ್ಭ ಪೊಲೀಸ್ ವಾಹನಕ್ಕೆ ಮುತ್ತಿಗೆ ಹಾಕಿದ ಘಟನೆ ಸುಂಕದಕಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ.

ಜಾಹೀರಾತು

ಕೇರಳದಲ್ಲಿ ಬಂದ್ ಹಿನ್ನಲೆಯಲ್ಲಿ ಬೇಡಗುಡ್ಡೆಯಲ್ಲಿ ಕೆಲವು ಕಿಡಿಗೇಡಿಗಳು ರಸ್ತೆ ತಡೆ ನಡೆಸಲು ಮುಂದಾಗಿದ್ದರು. ಈ ಸಂದರ್ಭ ಹರೀಶ್ ಬೇಡಗುಡ್ಡೆ (33) ಸುಂಕದಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದಾಗ ಕಿಡಿಗೇಡಿಗಳ ತಂಡವೊಂದು ಬೈಕ್ ಅನ್ನು ಅಡ್ಡಗಟ್ಟಿತು.

ಈ ಸಂದರ್ಭ ಹರೀಶ್ ಅವರ ಮೇಲೆ ಹಲ್ಲೆ ನಡೆದಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಳಿ ಬಗ್ಗೆ ಮಾಹಿತಿ ತಿಳಿದ ಗಸ್ತಿನಲ್ಲಿದ್ದ ವಿಟ್ಲ ಪೊಲೀಸ್ ಉಪನಿರೀಕ್ಷಕರನ್ನೊಳಗೊಂಡ ತಂಡ ಮಿತ್ತನಡ್ಕ ಮೂಲಕವಾಗಿ ಬೇಡಗುಡ್ಡೆಗೆ ಹೋಗಲು ಮುಂದಾದಾಗ ಕರ್ನಾಟಕ ಕೇರಳ ಗಡಿಯಲ್ಲಿ ರಸ್ತೆ ತಡೆ ನಡೆಸಿದ್ದು, ರಸ್ತೆಯಲ್ಲಿ ಇಟ್ಟ ವಸ್ತುಗಳನ್ನು ತೆಗೆಯಲು ಸೂಚನೆ ನೀಡಿದರೂ ತೆಗೆಯದೆ ಪೊಲೀಸರ ಮೇಲೆಯೇ ದಾಳಿಗೆ ಮುಂದಾದರು.

ಜಾಹೀರಾತು

ತಂಡವನ್ನು ಚದುರಿಸಿದ ವಿಟ್ಲ ಪೊಲೀಸರು ಆನೆಕಲ್ಲು ಭಾಗಕ್ಕೆ ಬಂದಿದ್ದಾರೆ. ಭದ್ರತೆಯ ದೃಷ್ಠಿಯಿಂದ ಕೆಎಸ್‌ಆರ್ ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ