ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಬಂಟ್ವಾಳದ ಬೇಬಿ ಕುಂದರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸಿನಂತೆ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಈ ನೇಮಕ ಮಾಡಿದ್ದು, ಇತ್ತೀಚಿಗಷ್ಟೇ ಕುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಂದಿದ್ದರು. ವಿಜಯಾ ಬ್ಯಾಂಕಿನಲ್ಲಿ ಸ್ವಯಂನಿವೃತ್ತಿ ಪಡೆದಿರುವ ಬೇಬಿ ಕುಂದರ್ ಅವರು ಕಬಡ್ಡಿ ಆಟಗಾರರೂ ಹೌದು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)