ಬಂಟ್ವಾಳ

ಜನಾರ್ದನ ಪೂಜಾರಿ ನಿವಾಸಕ್ಕೆ ರೈ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬುಧವಾರ ಬೆಳಗ್ಗೆ ಕೇಂದ್ರ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ.

ಜಾಹೀರಾತು

ಜಾಹೀರಾತು

19ರಂದು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ರಮಾನಾಥ ರೈ ಅವರು ಇತರ ನಾಯಕರೊಂದಿಗೆ ಪೂಜಾರಿ ಅವರ ನಿವಾಸಕ್ಕೆ ಬುಧವಾರ ಬೆಳಗ್ಗೆ ತೆರಳಿದರು. ಈ ಸಂದರ್ಭ ರಮಾನಾಥ ರೈಗಳು ಪೂಜಾರಿ ಅವರ ಆಶೀರ್ವಾದ ಪಡೆದರು. ರಮಾನಾಥ ರೈ ಅವರಿಗೆ ದೇವರ ದಯೆ ಇದೆ, ಬಂಟ್ವಾಳ ಜನತೆಯ ಆಶೀರ್ವಾದ ಇದೆ ಎಂದು ಹೇಳಿದ ಪೂಜಾರಿ, ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ರಮಾನಾಥ ರೈ ಅತ್ಯಧಿಕ ಅಂತರದ ಮತಗಳಿಂದ ವಿಜಯಿಯಾಗುತ್ತಾರೆ, ದೇಶದಲ್ಲಿ ಕಾಂಗ್ರೆಸ್ ಗೆ ಅಳಿವಿಲ್ಲ ಎಂದು ಹೇಳಿದರು. ಬಳಿಕ  ರೈ ಯವರನ್ನು ಅವರ ವಾಹನದ ತನಕ ಬೀಳ್ಕೊಟ್ಟು ಪೂಜಾರಿಯವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಅಬ್ಬಾಸ್ ಅಲಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಹೆಚ್ ಖಾದರ್ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts