ಕಲ್ಲಡ್ಕ

ಅತ್ಯಾಚಾರ ಪ್ರಕರಣ ಕ್ಕೆ ಗಡಿಯಾರದಲ್ಲಿ ಖಂಡನೆ, ಪ್ರತಿಭಟನೆ


ಜಮ್ಮು ಕಾಶ್ಮೀರದಲ್ಲಿ ಹಾಗೂ ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನ ಖಂಡಿಸಿ ಬಂಟ್ವಾಳ ತಾಲೂಕಿನ ಗಡಿಯಾರದ ಇತಿಕಾಫ್ ಮೀಲಾದ್ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಗಡಿಯಾರ ಜಂಕ್ಷನ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಭಿತ್ತಿಚಿತ್ರಗಳನ್ನ ಹಿಡಿದು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪತ್ರಕರ್ತ ಶಂಶೀರ್ ಬುಡೋಳಿ, ‘ಈ ಎರಡು ಪ್ರಕರಣಗಳನ್ನ ವಿರೋಧಿಸಿ ಇವತ್ತು ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಜಾತಿ, ಧರ್ಮ ಮೀರಿ ಇವತ್ತು ನಡೆಯುತ್ತಿರುವ ಹೋರಾಟದ ಉದ್ದೇಶ ನ್ಯಾಯವೇ ಹೊರತು ಬಲಪ್ರದರ್ಶನವಲ್ಲ. ದೇಶದ ಜನರ ಒಗ್ಗಟ್ಟಿನ ಹೋರಾಟಕ್ಕೆ ನ್ಯಾಯ ಸಿಗಬೇಕು. ಕಾನೂನು ಬಲಗೊಳ್ಳಬೇಕು ‘ ಅಂದರು.

ಜಾಹೀರಾತು

ಇದೇ ವೇಳೆ ಝೈನುಲ್ ಅಕ್ಬರ್, ಹಮೀದ್ ದಾರಿಮಿ ಸಂಪ್ಯ, ರಶೀದ್ ಸಖಾಫಿ ಗಡಿಯಾರ ಮಾತನಾಡಿದರು. ಪ್ರತಿಭಟನೆಯಲ್ಲಿ ಅಬ್ದುಲ್ ಮಜೀದ್ ದಾರಿಮಿ, ಸ್ವಾದೀಕ್ ಮುಹಿನಿ, ಸಿದ್ದೀಕ್ ಫೈಝಿ ಉಪಸ್ಥಿತರಿದ್ದರು. ಜೊತೆಗೆ ಇತಿಕಾಫ್ ಮೀಲಾದ್ ಕಮಿಟಿಯ ಪದಾಧಿಕಾರಿಗಳಾದ ಅಬ್ದುಲ್ ರಶೀದ್ ಗಡಿಯಾರ, ಅಬ್ದುಲ್ ಅಝೀಝ್ ಗಡಿಯಾರ, ಹೈದರ್ ವಿದ್ಯಾನಗರ,ಅಲ್ತಾಫ್ ವಿದ್ಯಾನಗರ, ನೌರೂಶ್ ವಿದ್ಯಾನಗರ, ನಿಝಾಂ, ಸಲ್ಮಾನ್ ಜೋಗಿಬೆಟ್ಟು ಸೇರಿ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ