ಬಂಟ್ವಾಳ

ಬಸವಣ್ಣ ಚಿಂತನೆ ಸಾರ್ವಕಾಲಿಕ: ತಹಶೀಲ್ದಾರ್ ವೈ.ರವಿ

ಬಸವಣ್ಣ ಚಿಂತನೆ ಸಾರ್ವಕಾಲಿಕವಾಗಿದ್ದು, ಸಮಾಜದಲ್ಲಿ ನೆಲೆಯೂರಿದ್ದ ಸಾಮಾಜಿಕ ಪಿಡುಗು, ಜಾತಿ ವ್ಯವಸ್ಥೆಗಳ ವಿರುದ್ಧ ಕ್ರಾಂತಿ ಮೂಡಿಸಿದ್ದಾರೆ ಎಂದು ತಹಶೀಲ್ದಾರ್ ವೈ. ರವಿ ಹೇಳಿದರು.

ಜಾಹೀರಾತು

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಬಸವ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರು, ಬಸವಣ್ಣರ ತತ್ವ, ಜೀವನಾದರ್ಶವನ್ನು ಮೈಗೂಡಿಸುವ ಕಾರ್ಯ ಪ್ರತಿಯೊಬ್ಬರಿಂದಲೂ ನಡೆಯಬೇಕೆಂದು ತಿಳಿಸಿದರು.

ಉಪ ತಹಶೀಲ್ದಾರ್ ಗಳಾದ ಎ. ಪ್ರಕಾಶ್, ರಾಜೇಶ್ ನಾಯ್ಕ್, ಗ್ರೆಟ್ಟಾ ಮಸ್ಕರೇಂಜಸ್, ಆಹಾರ ಶಾಖೆಯ ಶ್ರೀನಿವಾಸ್ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿದರು. ದ.ಕ.ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಜನಾರ್ಧನ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ