ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ರಮಾನಾಥ ರೈ ಅವರು ಗುರುವಾರ ಬೆಳಗ್ಗೆ ಬಂಟ್ವಾಳದಲ್ಲಿ ನಾಮಪತ್ರ ಸಲ್ಲಿಸಿದರು.
ಬಿ.ಸಿರೋಡಿನಲ್ಲಿರುವ ಪಕ್ಷ ಕಚೇರಿಯಿಂದ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ತಾಲೂಕು ಮಿನಿ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿ.ಎಚ್.ಖಾದರ್, ಜಿನರಾಜ ಆರಿಗ, ಜೋಸ್ಫಿನ್ ಡಿಸೋಜ ಮತ್ತು ಚಿದಾನಂದ ಪೂಜಾರಿ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಎರಡು ಮತೀಯ ಪಕ್ಷಗಳೊಂದಿಗೆ ತನ್ನ ಸ್ಪರ್ಧೆ ಇರಲಿದೆ ಎಂದು ಹೇಳಿದರು.