ಸಾರ್ವತ್ರಿಕ ವಿಧಾನ ಸಭಾ ಚುನಾವಣೆ 2018 ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ನೀತಿ ಸಂಹಿತೆ ಜಾರಿಯಲ್ಲಿ ಇರುವ ದಿನಾಂಕದವರೆಗೆ ಯಾವುದೇ ಹೊಸ ರೈತರಿಗೆ ಕೃಷಿ ಉದ್ದೇಶಕ್ಕಾಗಿ ರಿಯಾಯಿತಿ ಬಡ್ಡಿ ದರದಲ್ಲಿ ಹೊಸ ಸಾಲವನ್ನು ಮಂಜೂರು ಅಥವಾ ವಿತರಣೆ ಮಾಡುವಂತಿಲ್ಲ. ಆದರೆ ಈಗಾಗಲೇ ಹಿಂದಿನ ವರ್ಷದಲ್ಲಿ ನೀಡಿದ ಸಾಲವನ್ನು ರೈತರು ಮರುಪಾವತಿಸಿದಲ್ಲಿ ನವೀಕರಣ ಮಾಡಬಹುದಾಗಿದೆ.
ಸ್ವಸಹಾಯ ಗುಂಪುಗಳಿಗೆ ನೀಡುವ ಸಾಲವನ್ನು ನೀತಿ ಸಂಹಿತೆ ಜಾರಿಯಲ್ಲಿರುವ ದಿನಾಂಕದವರೆಗೆ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ಈಗಾಗಲೇ ಸಾಲ ಪಡೆದಿರುವ ಹಳೇ ಗುಂಪಿಗಾಗಲೀ ಅಥವಾ ಹೊಸ ಗುಂಪಿನ ಹೆಸರಿನಲ್ಲಿ ಯಾವುದೇ ಸ್ವಸಹಾಯ ಗುಂಪುಗಳಿಗೆ ಸಾಲ ಮಂಜೂರು ಅಥವಾ ಸಾಲ ವಿತರಣೆ ಮಾಡುವಂತಿಲ್ಲ.
ಈ ಎಲ್ಲಾ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಇಲಾಖಾ ಮತ್ತು ಡಿಸಿಸಿ ಬ್ಯಾಂಕಿನ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ"
Be the first to comment on "ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ"