ಬಂಟ್ವಾಳ ಕ್ಷೇತ್ರ ಗೆದ್ದರೆ ರಾಜ್ಯಮಟ್ಟದಲ್ಲಿ ಗೆದ್ದಂತೆ: ನಳಿನ್ ಕುಮಾರ್ ಕಟೀಲ್

ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ಬಂಟ್ವಾಳವನ್ನು ಬಿಜೆಪಿ ಗೆದ್ದರೆ ಉಳಿದ ಏಳು ಸ್ಥಾನಗಳನ್ನೂ ಗೆದ್ದಂತೆ. ರಾಜ್ಯ ಮಟ್ಟದಲ್ಲಿ ಬಿಜೆಪಿ ಬಂಟ್ವಾಳದ ವಿಜಯದ ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಬಂಟ್ವಾಳ ಗೆದ್ದರೆ ಜಿಲ್ಲೆ ಮಾತ್ರವಲ್ಲ, ಕರ್ನಾಟಕವೇ ಗೆದ್ದಂತೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಜಾಹೀರಾತು

ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ಬಿಜೆಪಿಯ ಬಂಟ್ವಾಳ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಚುನಾವಣಾ ನಾಮಪತ್ರ ಸಲ್ಲಿಕೆಯ ಪೂರ್ವಭಾವಿಯಾಗಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ವಿಧಾನಸಭೆ ಪ್ರವೇಶಿಸಿದರೆ, ರಮಾನಾಥ ರೈ ಮನೆಯಲ್ಲಿ ಕುಳಿತುಕೊಳ್ಳುವ ಕಾಲ ಬಂದಿದೆ. ನೀವು ಮತೀಯ ಭಾವನೆ ಕೆರಳಿಸಿದಿರಿ, ಹಿಂದು ಮುಸಲ್ಮಾನರ ನಡುವೆ ಒಡಕು ಮೂಡಿಸಿದಿರಿ ಎಂದು ರೈ ಕುರಿತು ಹೇಳಿದ ಅವರು, ರಮಾನಾಥ ರೈ ಅವಯಲ್ಲಿ ಹತ್ಯೆಗಳು ನಡೆದವು, ಜೈಲಿನಲ್ಲಿ ದಾಳಿ ನಡೆಯಿತು, ಜನರು ೩೦ ವರ್ಷ ಅಭಿವೃದ್ಧಿಯನ್ನು ಹೊಂದದೆ ಉಪವಾಸ ಬಿದ್ದರೆ, ರಮಾನಾಥ ರೈ ಯಾವುದೇ ಅಭಿವೃದ್ಧಿ ಮಾಡದೆ ಬಿಜೆಪಿಯವರು ಒದಗಿಸಿದ ಆಸ್ಪತ್ರೆ, ಪಾಲಿಟೆಕ್ನಿಕ್, ಅಗ್ನಿಶಾಮಕ ಇಲಾಖೆ, ಪದವಿ ಕಾಲೇಜು, ಏತ ನೀರಾವರಿ ನ್ಯಾಯಾಲಯ ಕಟ್ಟಡ, ಬಸ್ ನಿಲ್ದಾಣವನ್ನು ನಾವು ಮಾಡಿದ್ದು ಎಂದರು. ಮಂತ್ರಿಯಾಗಿ, ಶಾಸಕರಾಗಿ ರಮಾನಾಥ ರೈ ಸಂಪೂರ್ಣ ವಿಫಲರಾಗಿದ್ದಾರೆ ಎಂದ ನಳಿನ್, ಈ ಬಾರಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯ ಗಳಿಸಲಿದೆ ಎಂದು ನಳಿನ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಕಾಂಗ್ರೆಸ್ ನ ಪ್ರಮುಖ ನಾಯಕರು ಇದೇ ಜನಾರ್ದನ ಪೂಜಾರಿ ಮನೆ ಬಳಿಬಾರಿ ಓಡಾಡಿದರೂ ಪೂಜಾರಿಯವರ ನೆನಪಾಗಲಿಲ್ಲ, ಕಾಂಗ್ರೆಸ್ ಸಮಾವೇಶ ನಡೆಸಿದಾಗಲೂ ಜನಾರ್ದನ ಪೂಜಾರಿ ನೆನಪಾಗಲಿಲ್ಲ. ಆದರೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ಪೂಜಾರಿ ಮನೆ ಭೇಟಿಗಳು ನಡೆಯುತ್ತಿವೆ ಎಂದರು.

ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಕಾರಕ್ಕೆ ಬರಬೇಕಾಗಿದ್ದು, ಬಂಟ್ವಾಳದಲ್ಲೂ ಗೆಲ್ಲಿಸಬೇಕಾಗಿದೆ. ಗೆದ್ದರೆ ರಾಜಧರ್ಮ ಪಾಲಿಸುತ್ತೇನೆ, ಪಕ್ಷದ ಕಾರ್ಯಕರ್ತರಿಗೆ ಆದ ಅನ್ಯಾಯ ಸರಿಪಡಿಸುತ್ತೇನೆ ಎಂದರು.

ಜಾಹೀರಾತು

ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್ ಮಾತನಾಡಿ, ಸಿದ್ದರಾಮಯ್ಯ ದುರಹಂಕಾರ ಮತ್ತು ದರ್ಪದ ಆಡಳಿತ ನಡೆಸಿದ್ದಾರೆ. ಕಲ್ಲಡ್ಕ ಶಾಲೆ ಅನ್ನ ಕಸಿದದ್ದು, ಹತ್ಯೆಗಳು ಇದಕ್ಕೆ ಉದಾಹರಣೆ, ರಾಜೇಶ್ ನಾಯ್ಕ್ ಅವರ ಕೃಷಿ ಸೇವೆ ರಾಜ್ಯಕ್ಕೆ ಮಾದರಿ ಎಂದರು. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಮುಖರಾದ ಮೋನಪ್ಪ ಭಂಡಾರಿ, ಪದ್ಮನಾಭ ಕೊಟ್ಟಾರಿ, ಜಿ.ಆನಂದ, ಜಿತೇಂದ್ರ ಕೊಟ್ಟಾರಿ, ಕಮಲಾಕ್ಷಿ ಪೂಜಾರಿ, ಸುಲೋಚನಾ ಭಟ್, ಸುಗುಣ ಕಿಣಿ, ತುಂಗಪ್ಪ ಬಂಗೇರ, ಕೇರಳ ಬಿಜೆಪಿ ಮುಖಂಡ ಕೆ.ಸುರೇಂದ್ರನ್, ಬೃಜೇಶ್ ಚೌಟ ಉಪಸ್ಥಿತರಿದ್ದರು. ಮೋನಪ್ಪ ದೇವಸ್ಯ ವಂದಿಸಿದರು. ರಾಮದಾಸ ಬಂಟ್ವಾಳ ಕಾರ್ಯಕ್ರಮ ನಿರ್ವಹಿಸಿದರು. ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ ಸ್ವಾಗತಿಸಿದರು. ಇದಕ್ಕೂ ಮುನ್ನ ಪೊಳಲಿಯಿಂದ ಬಿ.ಸಿ.ರೋಡಿನವರೆಗೆ ಕಾಲ್ನಡಿಗೆಯಲ್ಲಿ ರಾಜೇಶ್ ನಾಯ್ಕ್ ಆಗಮಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಕ್ಷೇತ್ರ ಗೆದ್ದರೆ ರಾಜ್ಯಮಟ್ಟದಲ್ಲಿ ಗೆದ್ದಂತೆ: ನಳಿನ್ ಕುಮಾರ್ ಕಟೀಲ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*