ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ ಹಾಗೂ ಅರಣ್ಯ ಇಲಾಖೆ ಇದ ಜಂಟಿ ಆಶ್ರಯದಲ್ಲಿ ವಿಶ್ವ ಭೂ ದಿನವನ್ನು ಬಿ.ಸಿ.ರೋಡಿನ ನ್ಯಾಯಲಯದ ಆವರಣದಲ್ಲಿ ಆಚರಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ್ ಯು. ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್. ವಲಯ ಅರಣ್ಯಧಿಕಾರಿ ಬಿ.ಸುರೇಶ್, ಸಹಾಯಕ ಸರ್ಕಾರಿ ವಕೀಲ ಸತೀಶ್ ಕುಮಾರ್ ಶಿವಗಿರಿ, ವಕೀಲರಾದ ಸತೀಶ್ ಬಿ., ಆಶಾಮಣಿ ಡಿ.ರೈ, ಸಕೀನಾ, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ವಿನಯಕುಮಾರ್, ಭಾಸ್ಕರ್ ಮತ್ತಿತರರು ಹಾಜರಿದರು.