ಬಂಟ್ವಾಳ ಕ್ಷೇತ್ರದ ಜನರಿಗೆ ಅಭದ್ರತೆ, ಭಯದ ವಾತಾವರಣ: ಎಸ್.ಡಿ.ಪಿ.ಐ. ಅಭ್ಯರ್ಥಿ ರಿಯಾಝ್ ಫರಂಗಿಪೇಟೆ

  • ರಮಾನಾಥ ರೈ ವಿರುದ್ಧ ವಾಗ್ದಾಳಿ

ಬಂಟ್ವಾಳ ಕ್ಷೇತ್ರದ ಜನರು ಅಭದ್ರತೆ ಹಾಗೂ ಭಯದ ವಾತಾರಣದಲ್ಲಿ ಜೀವಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಆರೋಪಿಸಿದ್ದಾರೆ.

ಜಾಹೀರಾತು

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಚಿವರಿಗೆ ತನ್ನ ಪಕ್ಷದ ನಾಯಕ ಹಾಗೂ ಗ್ರಾಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯಾ ನೈಜ ಆರೋಪಿಗಳನ್ನು ಬಂಧಿಸಿ, ಶಿಕ್ಷಿಸಲು ಸಾಧ್ಯವಾಗದಿದ್ದರೆ, ಜನಸಾಮಾನ್ಯರು ನ್ಯಾಯ ನಿರೀಕ್ಷಿಸಲು ಸಾಧ್ಯವೇ ಎಂದರು.

ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಮಾತನಾಡಿ, ಜನತೆಯು ಎಸ್‌ಡಿಪಿಐ ಪಕ್ಷಕ್ಕೆ ಬೆಂಬಲವಾಗಿ ನಿಂತಿಕೊಂಡಿರುವುದು ನಮ್ಮ ರಾಜಕೀಯ ಶಕ್ತಿಯನ್ನು ಇನ್ನೂ ಹೆಚ್ಚಿಸಿದೆ. ಈ ಬೆಳಣಿಗೆಯು ಕರ್ನಾಟಕದ ರಾಜಕೀಯದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಲಿದೆ ಎಂದರು.

ಸಭೆಯಲ್ಲಿ ಎಸ್‌ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಎಸ್.ಎಚ್. ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ರಾಜ್ಯ ಸಮಿತಿ ಸದಸ್ಯ ನ್ಯಾ. ಅಬ್ದುಲ್ ಮಜೀದ್ ಖಾನ್, ಉತ್ತರ ವಿಧಾನಸಬಾ ಕ್ಷೇತ್ರ ಅಭ್ಯರ್ಥಿ ಜಲೀಲ್ ಕೃಷ್ಣಾಪುರ, ಜಿಲ್ಲಾ ನಾಯಕರಾದ ಇಕ್ಬಾಲ್ ಬೆಳ್ಳಾರೆ, ಆನಂದ್ ಮಿತ್ತಬೈಲ್, ಆಂಟೋನಿ ಪ್ರದೀಪ್, ಪಿಎಫ್‌ಐ ಬಂಟ್ವಾಳ ಘಟಕ ಅಧ್ಯಕ್ಷ ಇಜಾಝ್ ಅಹ್ಮದ್, ಯೂಸುಫ್ ಆಲಡ್ಕ, ಸಜಿಪನಡು ಗ್ರಾಪಂ ಅಧ್ಯಕ್ಷ ನಾಸಿರ್, ವುಮೆನ್ಸ್ ಇಂಡಿಯಾ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಪುರಸಭಾ ಸದಸ್ಯರಾದ ಇಕ್ಬಾಲ್ ಐ.ಎಂ.ಆರ್, ಮುಮ್ತಾಝ್ ತಲಪಾಡಿ, ಜಾಫರ್ ಸಾದಿಕ್ ಫೈಝಿ, ನವಾಝ್ ಕಟ್ಟೆ ಮುಂತಾದವರು ಉಪಸ್ಥಿತರಿದ್ದರು. ಮೊನೀಶ್ ಅಲಿ ಸ್ವಾಗತಿಸಿ, ಅಕ್ಬರ್ ಅಲಿ ನಿರೂಪಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಕ್ಷೇತ್ರದ ಜನರಿಗೆ ಅಭದ್ರತೆ, ಭಯದ ವಾತಾವರಣ: ಎಸ್.ಡಿ.ಪಿ.ಐ. ಅಭ್ಯರ್ಥಿ ರಿಯಾಝ್ ಫರಂಗಿಪೇಟೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*