ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಮನೆಗೆ ಬುಧವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ಭೇಟಿ ನೀಡಿ, ಶುಕ್ರವಾರ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಈ ಬಾರಿ ಬಹುಮತದಿಂದ ಅಧಿಕಾರಕ್ಕೆ ಬರಲು ರಾಹುಲ್ ಗಾಂಧಿ ಭೇಟಿಯು ಪೂರಕವಾಗಲಿದೆ ಎಂದು ಪೂಜಾರಿ ಈ ಸಂದರ್ಭ ಹೇಳಿದರು. ಡಿಸಿಸಿ ಉಪಾಧ್ಯಕ್ಷ ಬೇಬಿ ಕುಂದರ್, ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಉಪಸ್ಥಿತರಿದ್ದರು.