ಬಂಟ್ವಾಳ

ಅಭಿವೃದ್ಧಿ ಕಾರ್ಯಗಳಿಗೆ ಮತದಾರರ ಆಶೀರ್ವಾದ: ರಮಾನಾಥ ರೈ ವಿಶ್ವಾಸ

ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ ತೃಪ್ತಿ ನನಗಿದೆ. ಈ ಬಾರಿಯೂ ಮತದಾರರು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಗರಿಷ್ಠ ಮತಗಳಿಂದ ಆಶೀರ್ವಾದ ಮಾಡುವ ನಿರೀಕ್ಷೆ, ವಿಶ್ವಾಸ ಇದೆ.

ಹೀಗಂದವರು ಕಾಂಗ್ರೆಸ್ ನ ಬಂಟ್ವಾಳ ಕ್ಷೇತ್ರ ಅಭ್ಯರ್ಥಿ ಬಿ.ರಮಾನಾಥ ರೈ.

ಜಾಹೀರಾತು

ಬಂಟ್ವಾಳದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.27ರಂದು ಬೆಳಗ್ಗೆ 10ಕ್ಕೆ ಬಂಟ್ವಾಳದ ಬಿ.ಸಿ.ರೋಡ್‌ಗೆ ಆಗಮಿಸಲಿದ್ದಾರೆ ಬೆಳಗ್ಗೆ ಹೆಲಿಕಾಫ್ಟರ್ ಮೂಲಕ ಮೊಡಂಕಾಪು ಶಾಲಾ ಮೈದಾನಕ್ಕೆ ಆಗಮಿಸಿ, ನಂತರ ಬಿ.ಸಿ.ರೋಡ್ ಸರ್ಕಲ್ ಸಮೀಪ ಗೋಲ್ಡನ್ ಮೈದಾನದಲ್ಲಿ ನಡೆಯುವ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಸಹಿತ ಇನ್ನಿತರ ರಾಜ್ಯ ಹಾಗೂ ಜಿಲ್ಲಾ ನಾಯಕರು ಭಾಗವಹಿಸುವರು ಎಂದರು.

ರಾಜ್ಯದಲ್ಲಿಯೇ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿ ಆಚರಿಸುವ ಹೆಮ್ಮೆ ಬಂಟ್ವಾಳದ್ದು.  ಧಾರ್ಮಿಕ ಕ್ಷೇತ್ರಗಳಿಗೆ ಗರಿಷ್ಠ ಅನುದಾನವನ್ನು ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ತನ್ನ ಧರ್ಮವನ್ನು ಪ್ರೀತಿಸುವ ಮೂಲಕ ಇತರ ಧರ್ಮವನ್ನು ಗೌರವಿಸುವ ಕೆಲಸ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ -ಎಸ್‌ಡಿಪಿಐ ಮೈತ್ರಿಯ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ. ಮೈತ್ರಿ ಹಾಗು ಬೆಂಬಲದ ಬಗ್ಗೆ ಪಕ್ಷದ ವರಿಷ್ಠರು ಯಾವುದೇ ಸೂಚನೆ ನೀಡಿಲ್ಲ. ಜಾತ್ಯತೀತ ಪಕ್ಷಕ್ಕೆ ಬೆಂಬಲ ನೀಡುವುದು ಅವರವರ ಅಭಿಪ್ರಾಯ ಎಂದ ಅವರು, ಈ ಬಗ್ಗೆ ಹೆಚ್ಚು ಮಾತನಾಡಲು ಇಚ್ಛಿಸುವುದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜಶೇಖರ್ ಕೋಟ್ಯಾನ್, ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬೊಳ್ಳಾಯಿ, ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾದ ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲಿಯಾನ್, ಪ್ರಮುಖರಾದ ಬಿ.ಎಚ್.ಖಾದರ್, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಮಾಧವ ಮಾವೆ, ಬೇಬಿ ಕುಂದರ್, ಬಾಲಕೃಷ್ಣ ಆಳ್ವ, ಸುದರ್ಶನ್ ಜೈನ್, ಮಂಜುಳ ಮಾವೆ, ಜಯಂತಿ ಪೂಜಾರಿ, ಪರವೇಶ್ವರ, ಮಧುಸೂದನ್ ಶೆಣೈ ಮತ್ತಿತರರು ಇದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago