ರಾಜ್ಯ ವಿಧಾನಸಭಾ ಚುನಾವಣೆಯ ನಾಮಪತ್ರ ಹಿಂತೆಗೆದುಕೊಳ್ಳುವ ಕೊನೆಯ ದಿನವಾದ ಶುಕ್ರವಾರ ಎಸ್.ಡಿ.ಪಿ.ಐ. ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದು, ಕಣದಲ್ಲಿ ಐವರು ಉಳಿದಿದ್ದಾರೆ.
ಕಣದಲ್ಲಿ ಇರುವವರು ಇವರು: ಬಿ.ರಮಾನಾಥ ರೈ (ಕಾಂಗ್ರೆಸ್), ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು (ಬಿಜೆಪಿ), ಬಾಲಕೃಷ್ಣ ಪೂಜಾರಿ (ಲೋಕಸೇವಾದಳ), ಶಮೀರ್ (ಎಂಇಪಿ) ಮತ್ತು ಇಬ್ರಾಹಿಂ ಕೈಲಾರ್ (ಪಕ್ಷೇತರ). ಒಟ್ಟು 8 ಮಂದಿ 13 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 2 ನಾಮಪತ್ರಗಳು ತಿರಸ್ಕೃತಗೊಂಡಿದ್ದವು.