ಬಂಟ್ವಾಳ

ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲು ವಿಫಲ: ಅಲ್ಪಸಂಖ್ಯಾತ ವಿದ್ಯಾರ್ಥಿ ಸಮೂಹ ಆರೋಪ


ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲು ನಮ್ಮ ಕ್ಷೇತ್ರದ ಶಾಸಕರು ವಿಫಲರಾಗಿದ್ದು, ಮುಂದಿನ ದಿನಗಳಲ್ಲಿ ಆಯ್ಕೆಯಾಗಲಿರುವ ಕ್ಷೇತ್ರದ ಶಾಸಕರು ಈ ಬಗ್ಗೆ ಚಿಂತನೆ ನಡೆಸಬೇಕು ಎಂದು ನೂತನವಾಗಿ ಅಸ್ತಿತ್ವಕ್ಕೆ ಬಂದ ಬಂಟ್ವಾಳ ಅಲ್ಪಸಂಖ್ಯಾತ ವಿದ್ಯಾರ್ಥಿ ಸಮೂಹದ ಅಧ್ಯಕ್ಷ ಇಸ್ರಾರ್ ಗೂಡಿನಬಳಿ ಹೇಳಿದ್ದಾರೆ.

ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾದ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಲಲಿತಕಲಾ ಕ್ಷೇತ್ರಗಳಲ್ಲಿ ಪ್ರೋತ್ಸಾಹಿಸುವ ಕಾರ್ಯ ಮುಂದೆ ಆಯ್ಕೆ ಆಗಲಿರುವ ಶಾಸಕರಿಂದ ನಿರೀಕ್ಷಿಸುತ್ತಿದ್ದೇವೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುಳುವಾಗುತ್ತಿರುವ ಮತೀಯ ವಿಚಾರ, ಘಟನೆಗಳನ್ನುಜ ಈ ಸಮಾಜದಿಂದ ಸಂಪೂರ್ಣವಾಗಿ ಶಮನ ಮಾಡುವ ಹೊಣೆಕಾರಿಕೆಯನ್ನು ನಿಭಾಯಿಸುವಲ್ಲಿ ಆಡಳಿತ, ಸರಕಾರ ವಿಫಲವಾಗಿದೆ ಎಂದರು.

ಜಾಹೀರಾತು

ಬಂಟ್ವಾಳ ಬಿ.ಸಿ.ರೋಡ್ ನಗರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿ ನಡೆಯುವಲ್ಲಿ ವಿಫಲವಾಗಿದೆ. ಇದರಿಂದ ಬೀದಿ ನಾಯಿ ಕಾಟ ಜಾಸ್ತಿಯಾಗಿದ್ದು, ವಿದ್ಯಾರ್ಥಿಗಳಿಗೆ ಸಂಕಷ್ಟ ತಂದಿದೆ. ಸ್ಥಳೀಯ ಶಾಸಕರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರ್ಥೈಸಿಕೊಳ್ಳಲು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿಲ್ಲ. ವಿದ್ಯಾಮಂದಿರಗಳನ್ನು ರಾಜಕೀಯ ಕೇಂದ್ರವನ್ನಾಗಿ ನಡೆಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಸಂಘಟನಾತ್ಮಕ ಸೃಜನಶೀಲತೆ ಕಳೆದುಕೊಳ್ಳಬೇಕಾದ ಅಪಾಯಕಾರಿ ಬೆಳವಣಿಗೆ ಇದೆ ಎಂದು ಅವರು ಹೇಳಿದರು.

ಗ್ರಾಮೀಣ ಮತ್ತು ನಗರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ ಸೌಲಭ್ಯ, ಸರ್ಕಾರಿ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ತಾಂತ್ರಿಕ ಶಿಕ್ಷಣ ಸಂಸ್ಥೆ, ಒಳ ಮತ್ತು ಹೊರ ಕ್ರೀಡಾಂಗಣ, ಸಾರ್ವಜನಿಕ ರಂಗಮಂದಿರ ನಿರ್ಮಾಣಗೊಂಡಿಲ್ಲ. ಇಲ್ಲಿನ ಬಹುತೇಕ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ನಿವಾರಣೆಗೊಂಡಿಲ್ಲ. ಇಲ್ಲಿನ ಪುರಸಭಾ ವ್ಯಾಪ್ತಿಯ ರಸ್ತೆ ಬದಿ ಅಸಮರ್ಪಕ ತ್ಯಾಜ್ಯ ವಿಲೇವಾರಿಯಿಂದ ಬೀದಿ ನಾಯಿ ಕಾಟ ಹೆಚ್ಚಳಗೊಂಡಿರುವ ಬಗ್ಗೆ ಈಗಾಗಲೇ ಹಲವಾರು ಬಾರಿ ಸ್ಥಳೀಯ ಶಾಸಕರಿಗೆ ದೂರಿಕೊಂಡರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಯುವಜನತೆಗೆ ಅನುಕೂಲವಾಗುವಂತೆ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಯಾವುದೇ ಕಂಪೆನಿ, ಕೈಗಾರಿಕೆ ಆರಂಭಗೊಂಡಿಲ್ಲ. ಇದಕ್ಕೆ ಬದಲಾಗಿ ಕೆಲವೊಂದು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದರು.

ಇದಕ್ಕಾಗಿ ವಿದ್ಯಾರ್ಥಿಗಳು ಮತ್ತು ಯುವಜನರ ಸಮಸ್ಯೆ ಆಲಿಸಲು ವಿಧಾನಸಭಾ ಅಭ್ಯರ್ಥಿಗಳು ಪರಸ್ಪರ ಸಂವಾದ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಸಂಘಟಕರಾದ ಮಹಮ್ಮದ್ ರಿಕಾಝ್ ಬಿ.ಸಿ.ರೋಡ್, ಸುಹೈಲ್ ಖಾನ್ ಮಾರಿಪಳ್ಳ, ಝಿಯಾನ್ ಪಾಣೆಮಂಗಳೂರು, ಅಫ್ಜಲ್ ಜಬಲುನ್ನೂರು ಮೇಲ್ಕಾರ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

10 hours ago