ಸಾಮಾಜಿಕ ನ್ಯಾಯ ಒದಗಿಸಲು ಬದ್ದ : ರಾಜೇಶ್ ನಾಯ್ಕ್

ತನ್ನನ್ನು ಗೆಲ್ಲಿಸಿಕೊಟ್ಟಲ್ಲಿ ಜಾತಿ,ಮತ, ಬೇಧ ಮರೆತು ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲು ಬದ್ದನಾಗಿರುವುದಾಗಿ  ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಯು.ರಾಜೇಶ್ ನಾಯ್ಕ್ ಭರವಸೆ ನೀಡಿದ್ದಾರೆ.

ಜಾಹೀರಾತು

ಬಂಟ್ವಾಳ ಕ್ಷೇತ್ರದ  ಸಂಗಬೆಟ್ಟು,ಕರ್ಪೆ,ನೆಲ್ಲಿಗುಡ್ಡೆ, ಕಲ್ಲಾಪು,ನೆಕ್ಲಾಜೆ,ಕುಟ್ಟಿಕಳ ಪರಿಸರದಲ್ಲಿ ಬಿರುಸಿನ  ಮತಯಾಚನೆಗೈದ ರಾಜೇಶ್ ನಾಯ್ಕ್  ಬಳಿಕ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ತನಗೆ ಜನತೆ ಆಶೀರ್ವಾದ ಮಾಡಿದರೆ ಈ ಭಾಗದ   ಸರ್ವತ್ತೋಮುಖ ಅಭಿವೃದ್ದಿಗೆ ಶ್ರಮಿಸುವುದರ ಜತೆಗೆ ಕಾರ್ಯಕರ್ತರು ಹಾಗೂ ಮತದಾರರ ಸೇವೆ ಹಗಲಿರುಳು ಶ್ರಮಿಸುವುದಾಗಿ ಆಶ್ವಾಸನೆ ನೀಡಿದರು.

ನಾಗರಿಕ ಸಮಾಜದಲ್ಲಿ ಜನರು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಿಸಲು  ಆದ್ಯತೆ ನೀಡುವುದರ ಜೊತೆಗೆ ಬಂಟ್ವಾಳದಲ್ಲಿ ಭಯಮುಕ್ತ ವಾತಾವರಣ ಕಲ್ಪಿಸಲಾಗುವುದು ಎಂದರು.

ಜಾಹೀರಾತು

ಬಂಟ್ವಾಳದಲ್ಲಿಯು ಜನತೆಪರಿವರ್ತನೆಯನ್ನು ಬಯಸಿದ್ದು,ಈ ಬಾರಿ ಅತ್ಯಧಿಕ ಬಹುಮತದಿಂದ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ರಾಜೇಶ್ ನಾಯ್ಕ್ ವಿಶ್ವಾಸ ವ್ಯಕ್ತ ಪಡಿಸಿದರು.   ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯ ಪ್ರಭಾಕರ ಪ್ರಭು,ಪಕ್ಷದ ಪ್ರಮುಖ ಕಾರ್ಯಕರ್ತರಾದ ತೇಜಸ್ ಪೂಜಾರಿ,ಹರೀಶ್ ಪೂಜಾರಿ,ದಾಮೋದರ ಪೂಜಾರಿ,ಗಿರೀಶ್,ಕೃಷ್ಣಪ್ಪ ಪೂಜಾರಿ,ಹರೀಶ್ ಪಾದೆ, ನವೀನ್, ರಂಜೀತ್, ಉಮಾನಾಥ್ ಮೊದಲಾದವರು ಮತಯಾಚನೆಯಲ್ಲಿ ಭಾಗವಹಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಮಾಜಿಕ ನ್ಯಾಯ ಒದಗಿಸಲು ಬದ್ದ : ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*