ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ಡಿ.ಎಂ. ಕುಲಾಲ್ ಆಯ್ಕೆ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ 2018-19ರ ಸಾಲಿನ ನೂತನ ಅಧ್ಯಕ್ಷರಾಗಿ ಡಿ.ಎಂ.ಕುಲಾಲ್ ಸರ್ವಾನುಮತದಿಂದ ಆಯ್ಕೆಯಾದರು.

ಜಾಹೀರಾತು

ಇವರು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದಲ್ಲಿ ಕಳೆದ 32 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಾ, ಹಲವಾರು ಹುದ್ದೆಯನ್ನು ನಿರ್ವಹಿಸಿ, ಪತ್ರಕರ್ತರಾಗಿ ಲೇಖಕರಾಗಿ. ಸಮಾಜ ಸೇವಕರಾಗಿ ಸೇವೆಗೈದವರು. ಕೀರ್ತಿಶೇಷ ದಿ.ಅಮ್ಮೆಂಬಳ ಬಾಳಪ್ಪ. ದಿ.ಹೂವಯ್ಯ ಮೂಲ್ಯರವರ ಗರಡಿಯಲ್ಲಿ ಪಳಗಿದವರು.

ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಸದಸ್ಯರಾಗಿ 1989ರಿಂದ ನಿರಂತರ ಸೇವೆ ಸಲ್ಲಿಸುತ್ತಾ 1990ರಲ್ಲಿ ಬಂಟ್ವಾಳ ತಾಲೂಕು ಯುವಜನ ಒಕ್ಕೂಟದ ಸ್ಥಾಪಕ ಕಾರ್ಯದರ್ಶಿಯಾಗಿ. ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕರಾಗಿ ಸಂಘವನ್ನು ಕಟ್ಟಿ ಬೆಳೆಸಿದವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯರಾಗಿ ಬಂಟ್ವಾಳ ತುಳುಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದರು.

1990ರಲ್ಲಿ ಮೀಸಲಾತಿಯ ಬಗ್ಗೆ ಪುಸ್ತಕ ಹಾಗೂ ಇತರೆ ವಿಷಯ ಕುರಿತು ಈ ವರೆಗೆ 6 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಉಪಾಧ್ಯಕ್ಷರಾಗಿ ಕೃಷ್ಣಶ್ಯಾಂ ಬಿ.ಸಿ.ರೋಡು, ಕಾರ್ಯದರ್ಶಿಯಾಗಿ ಮಾಧವ ಕುಲಾಲ್ ಬಿ.ಸಿ.ರೋಡು, ಕೋಶಾಧಿಕಾರಿಯಾಗಿ ಲಿಂಗಪ್ಪ ಮಾಸ್ತರ್ ಪೊಸಳ್ಳಿ, ಜತೆಕಾರ್ಯದರ್ಶಿಯಾಗಿ ಪದ್ಮನಾಭ ಅಲೆತ್ತೂರು, ರಮೇಶ್ ಸಾಲಿಯಾನ್, ಸಂಘಟನಾ ಕಾರ್ಯದರ್ಶಿಯಾಗಿ ಯಾದವ ಕುಲಾಲ್, ಕ್ರೀಡಾಕಾರ್ಯದರ್ಶಿಯಾಗಿ ಜಯರಾಜ್ ಬಂಗೇರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕೇಶವ ಮಾಸ್ತರ್ ಮಾರ್ನಬೈಲು, ಜಲಜಾಕ್ಷಿ ಪಾಣೆಮಂಗಳೂರು, ಮಹಿಳಾ ಘಟಕದ ಅಧ್ಯಕ್ಷೆಯಾಗಿ ನಮಿತಾ ಅಲೆತ್ತೂರು ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ಡಿ.ಎಂ. ಕುಲಾಲ್ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*