ಬಂಟ್ವಾಳ

ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಉಚಿತ ವೈದ್ಯಕೀಯ ಶಿಬಿರ

ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಲಯನ್ಸ್ ಮತ್ತು ಲಿಯೊ ಕ್ಲಬ್, ಕದ್ರಿ ಹಿಲ್ಸ್, ಮಂಗಳೂರು ಮತ್ತು ಗುರು ಎಜುಕೇಶನ್ ಟ್ರಸ್ಟ್ ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ ಇವರ ಜಂಟಿ ಆಶ್ರಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು.

ಜಾಹೀರಾತು

ಅಧ್ಯಕ್ಷತೆಯನ್ನು ಗುರು ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ವಿಘ್ನರಾಜ್ ಭಟ್ ವಹಿಸಿಕೊಂಡಿದ್ದರು. ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವೈದ್ಯೆ ಡಾ| ನಿಶ್ಚಿತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಸರಸ್ವತಿ ವಿದ್ಯಾಲಯದ ಸಂಚಾಲಕರಾದ ಈಶ್ವರ ಪ್ರಸಾದ್ಪ್ರಸ್ತಾವನೆಗೈದರು.

ಲಯನ್ಸ್ ಮತ್ತು ಲಿಯೊ ಕ್ಲಬ್ ಉಪಾಧ್ಯಕ್ಷರಾದ ಡಾ| ಸುರೇಶ್ ನೆಗಳಗುಳಿ, ಇಂತಹ ಸಾರ್ವಜನಿಕ ಉಪಯುಕ್ತ ಕೆಲಸಗಳನ್ನು ಹಳ್ಳಿ ಪ್ರದೇಶದಲ್ಲಿ ನಡೆಸಿ ಶ್ರೀ ಸರಸ್ವತಿ ವಿದ್ಯಾಲಯವು ಮಹತ್ತರವಾದ ಕೊಡುಗೆಯನ್ನು ನೀಡಿದೆ ಎಂದು ಹೇಳಿದರು.

ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಮಧುರಾ ಈಶ್ವರ ಪ್ರಸಾದ್ ಸ್ವಾಗತಿಸಿದರು. ಲಯನ್ಸ್ ಮತ್ತು ಲಿಯೊ ಕ್ಲಬ್ ಕಾರ್ಯದರ್ಶಿಗಳಾದ ಶಂಕರ ನಾರಾಯಣ ಕಾರಂತ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀಲತಾ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಹೃದ್ರೋಗ, ಕಿವಿ, ಮೂಗು, ಗಂಟಲು ಶಸ್ತ್ರ ಚಿಕಿತ್ಸೆ, ಸ್ತ್ರೀರೋಗ ಮತ್ತು ಪ್ರಸೂತಿ, ಮಕ್ಕಳ ಚಿಕಿತ್ಸೆ, ಮಧುಮೇಹ, ರಕ್ತ ಪರೀಕ್ಷೆ, ಉಚಿತ ಔಷಧಿ ವಿತರಣೆ, ಸಂಪೂರ್ಣ ಆರೋಗ್ಯ ತಪಾಸಣೆ ಮುಂತಾದವುಗಳ ಪ್ರಯೋಜನವನ್ನು 200ಕ್ಕೂ ಹೆಚ್ಚು ಮಂದಿ ಉಚಿತವಾಗಿ ಪಡೆದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

9 hours ago