ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಭಯಮುಕ್ತ ವಾತಾವರಣದ ಸೆಲೆ: ತುಕಾರಾಮ ಪೂಜಾರಿ

ಈಗಿನ ಭಯ ಬೀಳಿಸುವ ವಾತಾವರಣದಲ್ಲಿ ಮಕ್ಕಳು ಬೆಳೆಯುವುದು ಹೇಗೆ ಎಂಬ ದಿಗಿಲು ಮೂಡಿದಾಗ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಬದುಕುವ ಆಸೆ ಮೂಡಿಸುತ್ತವೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ತುಕಾರಾಮ ಪೂಜಾರಿ ಹೇಳಿದರು.

pic: RAM NARESH MANCHI

ಮಂಚಿ ನೂಜಿಬೈಲು ಶಾಲೆಯಲ್ಲಿ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಬಿ.ವಿ.ಕಾರಂತ ನಾಟಕೋತ್ಸವದ ದಶಮಾನೋತ್ಸವದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜಾಹೀರಾತು


ತುಕಾರಾಮ ಪೂಜಾರಿಯವರ ಬದುಕು ಮತ್ತು ಅವರು ಕಟ್ಟಿ ಬೆಳೆಸಿ ದೇಶಕ್ಕೆ ನೀಡಿದ ಹೆಮ್ಮೆಯ ಕೊಡುಗೆಯಾದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ, ತುಕಾರಾಮ ದಂಪತಿಗಳಿಬ್ಬರ ನಿಸ್ವಾರ್ಥ ತ್ಯಾಗದ ಫಲ ಎಂದು ಮುಖ್ಯ ಅತಿಥಿಗಳಾದ ಡಾ. . ಪುಂಡಿಕಾಯಿ ಗಣಪ್ಪಯ್ಯ ಭಟ್ ಬಣ್ಣಿಸಿದರು.
ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿರುವ ಬಿ ವಿ ಕಾರಂತ ರಂಗಭೂಮಿಕಾ ಟ್ರಸ್ಟು ಮಂಚಿ ದಶ ಸಂಭ್ರಮದ ಈ ಸಂದರ್ಭದಲ್ಲಿ ಸಾಧಕರನ್ನು ಗುರುತಿಸಿ ಗೌರವಿಸುವ ಉತ್ತಮ ಕಾರ್ಯ ಮಾಡುತ್ತಿದೆ. ಕಾರಂತರ ಹೆಸರಿನ ಈ ಗೌರವವನ್ನು ಪಡೆಯುವುದು ನನ್ನ ಸೌಭಾಗ್ಯ ಎಂದು ತುಕಾರಾಮ ಪೂಜಾರಿ ಹೇಳಿದರು.

ರೇಷ್ಮಾ ನರಸಿಂಹ ಕಜೆಯವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಗೆ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ ಸಿ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ಸಂಸ್ಕೃತಿ ಸಂಸ್ಕಾರ ಇರುವಂತಹ ನಾಟಕ ಪ್ರದರ್ಶನ ನಡೆದು ಬರುತ್ತಿರಲಿ. ತು ಳು ಭಾಷೆಯ ಉಳಿವು ಬೆಳವಣಿಗೆಗಾಗಿ ಶಾಲೆಗಳಲ್ಲಿ ತು ಳು ವನ್ನು ಮೂರನೇ ಭಾಷೆಯಾಗಿ ಕಲಿಸಲು ಸರಕಾರ ಅನುಮತಿ ನೀಡಿದೆ. ತುಳು ಸಂಸ್ಕೃತಿ, ತುಳು ಭಾಷೆ ಅಭಿವೃದ್ಧಿಗೆ ಕೈಜೋಡಿಸೋಣ ಎಂದರು.
ಮುಖ್ಯ ಅತಿಥಿಗಳಾಗಿ ಡಾ ಗೋಪಾಲ್ ಆಚಾರ್ ಉಪಸ್ಥಿತರಿದ್ದರು. ಟ್ರಸ್ಟಿನ ಅಧ್ಯಕ್ಷರಾದ ರಾಮಚಂದ್ರ ಭಟ್ ಕಜೆ ಸ್ವಾಗತಿಸಿದರು. ಉಮಾನಾಥ ರೈ ವಂದನಾರ್ಪಣೆ ಮಾಡಿದರು. ರಮಾನಂದ ನೂಜಿಪ್ಪಾಡಿ ಮತ್ತು ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು.

ಎರಡನೆ ದಿನದ ಕಾರ್ಯಕ್ರಮವನ್ನು ಕಳೆ ಕಟ್ಟಿಸಲು ಬಂದವರು ನವಸುಮ ರಂಗಮಂಚ(ರಿ) . ಇವರು ದುರ್ದುಂಡೆ ದ್ರೌಣಿ ಎಂಬ ತುಳು ನಾಟಕವನ್ನು ಪ್ರದರ್ಶಿಸಿದರು. ರಚನೆ , ನಿರ್ದೇಶನ ಬಾಲಕೃಷ್ಣ ಕೊಡವೂರು. ಬೆಳಕು ಜಯಶೇಖರ ಮಡೆಪ್ಪಾಡಿ, ರಂಗಪರಿಕರ, ಸುಕೇಶ್ ಪೂಜಾರಿ ಕೀರ್ತಿ ಕುಮಾರ್, ರಂಗ ಸಜ್ಜಿಕೆ, ಪೃಥ್ವಿ ಆಕಾಶ್,ಪ್ರಸಾಧನ ದಿನೇಶ್ ಅಮೀನ್ ಕದಿಕೆ.ವಸ್ತ್ರ ವಿನ್ಯಾಸ ಧನಂಜಯ/ ವಿಷು ರಾವ್ ಹಾವಂಜೆಯವರದ್ದು ಇತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಭಯಮುಕ್ತ ವಾತಾವರಣದ ಸೆಲೆ: ತುಕಾರಾಮ ಪೂಜಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*