ಬಂಟ್ವಾಳ

ನೀರು, ರಸ್ತೆ ಅಭಿವೃದ್ಧಿಗೆ ಗರಿಷ್ಠ ಶ್ರಮ: ಸಿದ್ಧಕಟ್ಟೆಯಲ್ಲಿ ರಮಾನಾಥ ರೈ

ಸಂಗಬೆಟ್ಟು, ಕುಕ್ಕಿಪ್ಪಾಡಿ, ಚೆನ್ನೈತ್ತೋಡಿ, ರಾಯಿ, ಪಂಜಿಕಲ್ಲು ಹಾಗೂ ಅಮ್ಟಾಡಿ, ಅರಳ ಗ್ರಾಮ ಪಂಚಾಯತು ವ್ಯಾಪ್ತಿಯ 17 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲು ಅನುಷ್ಠಾನಕ್ಕೆ ತಂದ 26.07 ಕೋಟಿ ರೂಪಾಯಿ ವೆಚ್ಚದ ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಸಿದ್ದಕಟ್ಟೆ – ಮೂಡುಬಿದಿರೆ ರಸ್ತೆ ಸೇರಿದಂತೆ ಪರಿಸರದ ರಸ್ತೆಗಳ ಅಭಿವೃದ್ಧಿ, ಹೀಗೆ ಹಲವು ಯೋಜನೆಗಳನ್ನು ಈ ಭಾಗಕ್ಕೆ ನೀಡಲಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಅವರು ಸಿದ್ಧಕಟ್ಟೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬಿರುಸಿನ ಚುನಾವಾಣಾ ಪ್ರಚಾರಕೈಗೊಂಡಿದ್ದ ಸಂದರ್ಭದಲ್ಲಿ ಕರ್ಪೆಯಲ್ಲಿ ಮಾತಾನಾಡಿದರು.

ರಾಯಿ- ಮೂರ್ಜೆ ರಸ್ತೆಯ ಅಗಲೀಕರಿಸಿ ಡಾಮರೀಕರಣ, ಎಡಪದವು ಕುಪ್ಪೆಪದವು ಆರ್ಲ ಸೋರ್ನಾಡು ರಸ್ತೆಯ ಅಭಿವೃದ್ಧಿ,ವೇಣೂರು-ಮೂರ್ಜೆ ರಸ್ತೆ ಅಭಿವೃದ್ಧಿ, ಮೂಡುಬಿದರೆ – ಬಂಟ್ವಾಳ ರಸ್ತೆಯ ಸಿದ್ಧಕಟ್ಟೆ ಪೇಟೆಯಲ್ಲಿ ದ್ವಿಪಥ ರಸ್ತೆ ನಿರ್ಮಾಣ. ಸಿದ್ಧಕಟ್ಟೆ-ಕರ್ಪೆ-ಅಣ್ಣಳಿಕೆ ಗ್ರಾಮೀಣ ರಸ್ತೆ ಅಭಿವೃದ್ಧಿ, ಸಿದ್ಧಕಟ್ಟೆ – ಹೊಕ್ಕಾಡಿಗೋಳಿ – ಮಾವಿನಕಟ್ಟೆ – ಅಜ್ಜಿಬೆಟ್ಟು ರಸ್ತೆಯನ್ನು ಅಭಿವೃದ್ಧಿ ಮಾಡಲಾಗಿದೆ ಎಂದರು.

ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ದೇವಪ್ಪ ಕರ್ಕೇರಾ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.