ಬಂಟ್ವಾಳ

ನೀರು, ರಸ್ತೆ ಅಭಿವೃದ್ಧಿಗೆ ಗರಿಷ್ಠ ಶ್ರಮ: ಸಿದ್ಧಕಟ್ಟೆಯಲ್ಲಿ ರಮಾನಾಥ ರೈ

ಸಂಗಬೆಟ್ಟು, ಕುಕ್ಕಿಪ್ಪಾಡಿ, ಚೆನ್ನೈತ್ತೋಡಿ, ರಾಯಿ, ಪಂಜಿಕಲ್ಲು ಹಾಗೂ ಅಮ್ಟಾಡಿ, ಅರಳ ಗ್ರಾಮ ಪಂಚಾಯತು ವ್ಯಾಪ್ತಿಯ 17 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲು ಅನುಷ್ಠಾನಕ್ಕೆ ತಂದ 26.07 ಕೋಟಿ ರೂಪಾಯಿ ವೆಚ್ಚದ ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಸಿದ್ದಕಟ್ಟೆ – ಮೂಡುಬಿದಿರೆ ರಸ್ತೆ ಸೇರಿದಂತೆ ಪರಿಸರದ ರಸ್ತೆಗಳ ಅಭಿವೃದ್ಧಿ, ಹೀಗೆ ಹಲವು ಯೋಜನೆಗಳನ್ನು ಈ ಭಾಗಕ್ಕೆ ನೀಡಲಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಅವರು ಸಿದ್ಧಕಟ್ಟೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬಿರುಸಿನ ಚುನಾವಾಣಾ ಪ್ರಚಾರಕೈಗೊಂಡಿದ್ದ ಸಂದರ್ಭದಲ್ಲಿ ಕರ್ಪೆಯಲ್ಲಿ ಮಾತಾನಾಡಿದರು.

ರಾಯಿ- ಮೂರ್ಜೆ ರಸ್ತೆಯ ಅಗಲೀಕರಿಸಿ ಡಾಮರೀಕರಣ, ಎಡಪದವು ಕುಪ್ಪೆಪದವು ಆರ್ಲ ಸೋರ್ನಾಡು ರಸ್ತೆಯ ಅಭಿವೃದ್ಧಿ,ವೇಣೂರು-ಮೂರ್ಜೆ ರಸ್ತೆ ಅಭಿವೃದ್ಧಿ, ಮೂಡುಬಿದರೆ – ಬಂಟ್ವಾಳ ರಸ್ತೆಯ ಸಿದ್ಧಕಟ್ಟೆ ಪೇಟೆಯಲ್ಲಿ ದ್ವಿಪಥ ರಸ್ತೆ ನಿರ್ಮಾಣ. ಸಿದ್ಧಕಟ್ಟೆ-ಕರ್ಪೆ-ಅಣ್ಣಳಿಕೆ ಗ್ರಾಮೀಣ ರಸ್ತೆ ಅಭಿವೃದ್ಧಿ, ಸಿದ್ಧಕಟ್ಟೆ – ಹೊಕ್ಕಾಡಿಗೋಳಿ – ಮಾವಿನಕಟ್ಟೆ – ಅಜ್ಜಿಬೆಟ್ಟು ರಸ್ತೆಯನ್ನು ಅಭಿವೃದ್ಧಿ ಮಾಡಲಾಗಿದೆ ಎಂದರು.

ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ದೇವಪ್ಪ ಕರ್ಕೇರಾ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ