ವಿಟ್ಲ

ಅಲ್‌ಖೈರ್ ಮಹಿಳಾ ಶರೀಯತ್ ಕಾಲೇಜಿನ ಶಿಕ್ಷಕ-ರಕ್ಷಕರ ಸಭೆ

ವಿಟ್ಲದ ಮೇಗಿನಪೇಟೆ ಅಲ್‌ಖೈರ್ ಮಹಿಳಾ ಶರೀಯತ್ ಕಾಲೇಜಿನ ಶಿಕ್ಷಕ-ರಕ್ಷಕರ ಸಭೆಯು ಮೇಗಿನಪೇಟೆ ಹಯಾತುಲ್ ಇಸ್ಲಾಂ ಮದರಸದಲ್ಲಿ ಶನಿವಾರ ನಡೆಯಿತು.

ಜಾಹೀರಾತು

ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬು ಅಬ್ದುಲ್ ಸಲಾಂ ಲತೀಫಿ ಕೊಡುವಳ್ಳಿ ಕೇರಳ ದುವಾಃ ಆಶೀರ್ವಚನ ನೀಡಿದರು. ಕಾಲೇಜು ಆಡಳಿತ ಸಮಿತಿ ಅಧ್ಯಕ್ಷ ಇಬ್ರಾಹಿಂ ಏರ್ ಸೌಂಡ್ಸ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೂರ್ನಡ್ಕ ಜುಮಾ ಮಸೀದಿ ಖತೀಬು ಅಬೂಬಕ್ಕರ್ ಸಿದ್ದೀಕ್ ಜಲಾಲಿ ಅವರು ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಹಾಗೂ ರಕ್ಷಕರ ಪಾತ್ರ ಮಹತ್ವದಾಗಿದೆ. ಶರೀಯತ್ ಕಾಲೇಜುಗಳ ಮೂಲಕ ಇಸ್ಲಾಮಿನ ಆದರ್ಶ ಹಾಗೂ ವಿಧಿವಿಧಾನಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಹೆತ್ತವರ ಹಾಗೂ ಶಿಕ್ಷಕರ ಪ್ರೀತಿಗಳಿಸಿದಾಗ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾಲೇಜು ಶಿಕ್ಷಕರಾದ ಅಬ್ದುಲ್ ರಹಿಮಾನ್ ಫೈಝಿ ಪರ್ತಿಪ್ಪಾಡಿ, ಅಬ್ಬಾಸ್ ದಾರಿಮಿ ಕೆಲಿಂಜ, ಹಕೀಂ ಅರ್ಶದಿ ಪರ್ತಿಪ್ಪಾಡಿ, ಕಾಲೇಜು ಆಡಳಿತ ಸಮಿತಿ ಸದಸ್ಯರಾದ ಇಬ್ರಾಹಿಂ ಹಾಜಿ ಪೊನ್ನೋಟ್ಟು, ಶರೀಫ್ ಮೂಸ ಕುದ್ದುಪದವು ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ