ಜಿಲ್ಲಾ ಸುದ್ದಿ

ಇವಿಎಂ ಯಂತ್ರ ಕುರಿತು ರೈಗೆ ಸಂಶಯ: ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ

ಇವಿಎಂ ಯಂತ್ರದ ಬಗ್ಗೆ ಕೆಲವೊಂದು ಸಂಶಯವಿದೆ. ಈ ಬಗ್ಗೆ ಆರ್‌ಒ , ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ದೂರನ್ನು ನೀಡಿದ್ದು, ಕಾನೂನಾತ್ಮಕ ಹೋರಾಟ ಮಾಡಲಾವುವುದು ಎಂದು ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

 

ಫಲಿತಾಂಶದ ಹಿನ್ನೆಲೆಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ತಾನು ಇವಿಎಂ ಯಂತ್ರದ ಕೆಲವೊಂದು ದೋಷಗಳ ಬಗ್ಗೆಯೂ ಈ ಮೊದಲು ಉಲ್ಲೇಖ ಮಾಡಿದ್ದೆ. ಕಾಂಗ್ರೆಸ್‌ಗೆ ಮುನ್ನಡೆ ಸಿಗಬೇಕಾಗಿದ್ದ ಬೂತ್‌ಗಳಲ್ಲಿ ಸರಿಯಾದ ಫಲಿತಾಂಶ ಲಭ್ಯವಾಗಿಲ್ಲ ಹಾಗೂ ಇನ್ನಿತರ ಗೊಂದಲಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದೇವೆ ಎಂದು ಹೇಳಿದರು.

ಶಾಸಕ, ಸಚಿವನಾಗಿ ಸಾರ್ವಜನಿಕ ಬದುಕಿನಲ್ಲಿ ಬಹಳಷ್ಟು ಕೆಲಸ ಮಾಡುತ್ತಾ ಬಂದಿದ್ದೇನೆ. ಅಭಿವೃದ್ಧಿ ಕೆಲಸಗಳನ್ನು ಮಾಡುವವರನ್ನು ಗುರಿಯಾಗಿಸಿಕೊಂಡು ಉದ್ದೇಶ ಪೂರ್ವಕವಾಗಿ ಐಟಿ ದಾಳಿ ಮೂಲಕ ಬೆದರಿಸುವ ತಂತ್ರವನ್ನು ಮಾಡಿದೆ ಎಂದು ದೂರಿದರು.

ಜಾಹೀರಾತು

ತಾನು ಚುನಾವಣೆಯಲ್ಲಿ ೮ನೆ ಬಾರಿ ಸ್ಪರ್ಧಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಯಾವ ರೀತಿಯಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದೆ ಎಂಬುವುದು ಜನರಿಗೆ ತಿಳಿದಿದೆ ಎಂದರು.ಇನ್ನೂ ಕೂಡಾ ಜನರ ನಡುವೆ ಇರುತ್ತೇನೆ. ಕ್ಷೇತ್ರದ ಜನರ ಸಮಸ್ಯೆಗಳನ್ನು ಸ್ಪಂದಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಸಾಮಾಜಿಕ ಸೇವೆಯ ಜೊತೆಗೆ ಸಾಮರಸ್ಯದ ನೆಲೆಯನ್ನು ಬಲಪಡಿಸಲು ತಮ್ಮ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ಪಕ್ಷದ ಬಲವರ್ಧನೆಗಾಗಿ ಮತ್ತಷ್ಟು ಶ್ರಮಿಸುತ್ತೇನೆ ಎಂದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ