ಕಲ್ಲಡ್ಕ

ಗೋಸ್ವರ್ಗ ಯೋಜನೆ: ಮಾಣಿಯಲ್ಲಿ ಮಾಹಿತಿ ಕಾರ್ಯಾಗಾರ


ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಜನಭವನದಲ್ಲಿ ಗೋಸ್ವರ್ಗ ಯೋಜನೆ ಬಗ್ಗೆ ಮಾಹಿತಿ ಕಾರ್ಯಾಗಾರ, ಸಂವಾದ ನಡೆಯಿತು.

ಮಾಣಿ ಮಠದ ಸೇವಾ ಸಮಿತಿ ಅಧ್ಯಕ್ಷ ಹಾಗೂ ಗೋಸ್ವರ್ಗ ಲೋಕಾರ್ಪಣೆ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಹಾರಕರೆ ನಾರಾಯಣ ಭಟ್ ಮಾತನಾಡಿ ಗೋಸ್ವರ್ಗವು ಗೋವುಗಳ ಸಂರಕ್ಷಣೆ ಯೋಜನೆಯಾಗಿದ್ದು, ಸಾವಿರಕ್ಕೂ ಅಽಕ ಗೋವುಗಳ ಆಶ್ರಯತಾಣವಾಗಲಿದೆ. ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಭಾನ್ಕುಳಿ ಮಠದಲ್ಲಿ ಸಹಸ್ರ ಗೋವುಗಳ ಸಹಜ, ಸ್ವಚ್ಛಂದ ಬದುಕಿಗಾಗಿ ಈ ಅಪೂರ್ವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಯೋಜನೆಯು ಮೇ ೨೭ರಂದು ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಮತ್ತು ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮಹಾಮಂಡಲ ಅಧ್ಯಕ್ಷೆ ಈಶ್ವರಿ ಶ್ಯಾಮ್ ಭಟ್ ಬೇರ್ಕಡವು ಅಧ್ಯಕ್ಷತೆ ವಹಿಸಿ, ಮಾತನಾಡಿ, ಈ ಯೋಜನೆಯನ್ನು ಯಶಸ್ವಿಗೊಳಿಸುವುದಕ್ಕಾಗಿ ಸಾವಿರದ ಸುರಭಿ ಅಭಿಯಾನ ಆರಂಭಿಸಲಾಗಿದೆ. ಸಾವಿರಾರು ಸುರಭಿ ಸೇವಿಕೆಯರು ಈ ಮಹಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯದಾದ್ಯಂತ ಗೋಪ್ರೇಮಿಗಳು ಈ ಯೋಜನೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದರು.

ಜಾಹೀರಾತು

ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು ಅವರು ಮಾತನಾಡಿ, ಗೋಸಂರಕ್ಷಣೆಯ ಇಂತಹ ಪರಿಪೂರ್ಣ ಯೋಜನೆ ದೇಶದಲ್ಲಿಲ್ಲ. ದೇಸೀ ತಳಿಗಳನ್ನು ಸಂರಕ್ಷಿಸುವ ಶ್ರೀಗಳ ಈ ಯೋಜನೆಗೆ ಸುಮಾರು ೧೦ ಕೋಟಿ ರೂ.ಗಳ ಸಂಪನ್ಮೂಲದ ಆವಶ್ಯಕತೆಯಿದೆ. ಇದಕ್ಕೆ ಹಲವಾರು ದಾನಿಗಳು ಮುಂದೆ ಬಂದಿದ್ದು, ಈ ಯೋಜನೆಯ ಮಾಹಿತಿ ಪಡೆದುಕೊಂಡ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಜೀ ಅವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಮಹಾಮಂಡಲ ಮುಷ್ಟಿ ಭಿಕ್ಷೆ ಪ್ರಧಾನ ಮಲ್ಲಿಕಾ ಜಿ.ಕೆ.ಭಟ್, ಗೋಸ್ವರ್ಗ ಸಮಿತಿಯ ಸದಸ್ಯರಾದ ಪದ್ಮನಾಭ ಕೊಂಕೋಡಿ, ಪಡೀಲು ಮಹಾಬಲೇಶ್ವರ ಭಟ್, ಮುಳ್ಳೇರಿಯ ಹವ್ಯಕ ಮಂಡಲ ಅಧ್ಯಕ್ಷ ಪ್ರೊ.ಟಿ. ಶ್ರೀಕೃಷ್ಣ ಭಟ್, ಉಪ್ಪಿನಂಗಡಿ ಹವ್ಯಕ ಮಂಡಲ ಅಧ್ಯಕ್ಷ ಅಶೋಕ್ ಕೆದ್ಲ, ಮಂಗಳೂರು ಮಂಡಲ ಕಾರ್ಯದರ್ಶಿ ಪೆದಮಲೆ ನಾಗರಾಜ ಭಟ್ ಉಪಸ್ಥಿತರಿದ್ದರು. ದೇವಿಕಾ ಶಾಸ್ತ್ರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.