ಸಮಾಜ ಸೇವಕರಾಗಿ ಸ್ವಾರ್ಥ ರಹಿತ ಸೇವೆ ಮಾಡಿ ಸಮಾಜದ ಅಭ್ಯುದಯಕ್ಕೆ ಶ್ರಮಿಸಿದ ದೋಗು ಶೆಟ್ಟಿ ಅವರ ಜೀವನ ಇತರರಿಗೆ ಮಾದರಿಯಾಗಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಅವರು ಹೇಳಿದರು.
ಜಾಹೀರಾತು
ಬಂಟ್ವಾಳ ತಾ. ಅಜ್ಜಿಬೆಟ್ಟು ಗ್ರಾಮದ ಕಡ್ತಾಲಬೆಟ್ಟುವಿನಲ್ಲಿ ಇಲ್ಲಿಯ ಪ್ರಗತಿಪರ ಕೃಷಿಕ ದಿ. ದೋಗು ಶೆಟ್ಟಿ ಅವರ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.
ಕಂಬಳ ಪ್ರಧಾನ ತೀರ್ಪುಗಾರ ರಾಜೀವ ಶೆಟ್ಟಿ ಎಡ್ತೂರು ಮಾತನಾಡಿ, ಶ್ರೇಷ್ಠ ವ್ಯಕ್ತಿಗಳು ಪರೋಪಕಾರ ಗುಣದಿಂದ ಜನಮಾನಸದಲ್ಲಿ ಮರಣದ ಬಳಿಕವೂ ಸ್ಮರಣೀಯರಾಗಿರುತ್ತಾರೆ ಎಂದು ಹೇಳಿದರು.
ಕೆನರಾ ಬಸ್ ಮಾಲಕ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ಉಪನ್ಯಾಸಕ ಭಾಸ್ಕರ ರೈ ಕುಕ್ಕುವಳ್ಳಿ, ರಮೇಶ್ ರೈ ಕುಕ್ಕುವಳ್ಳಿ, ಪ್ರಮುಖರಾದ ಕೃಷ್ಣ ಶೆಟ್ಟಿ ಗೋಂಜಗುತ್ತು, ವಸಂತ ಶೆಟ್ಟಿ ಕೇದಗೆ, ಜಗದೀಶ ಕುಂದರ್, ದೇವಪ್ಪ ಶೆಟ್ಟಿ ಕುಂಟಜಾಲು, ರಮೇಶ್ ಶೆಟ್ಟಿ ವಾಮದಪದವು, ದೋಗು ಶೆಟ್ಟಿ ಅವರ ಪುತ್ರರಾದ ಯಶ್ವಿನ್, ಯತೀನ್ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸ್ವಾರ್ಥರಹಿತ ಬದುಕು ಇತರರಿಗೆ ಮಾದರಿ: ಹರಿಕೃಷ್ಣ ಬಂಟ್ವಾಳ"
Be the first to comment on "ಸ್ವಾರ್ಥರಹಿತ ಬದುಕು ಇತರರಿಗೆ ಮಾದರಿ: ಹರಿಕೃಷ್ಣ ಬಂಟ್ವಾಳ"