ಪ್ರಮುಖ ಸುದ್ದಿಗಳು

ಯಡಿಯೂರಪ್ಪ ಔಟ್, ಕುಮಾರಸ್ವಾಮಿ ಇನ್

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ರಾಜ್ಯದ ಜನತೆಗೆ ಭರವಸೆ ಕೊಡ್ತೇನೆ. ಇನ್ನೈದು ವರ್ಷ ಅಥವಾ ಅದರ ಮಧ್ಯ ಮತ್ತೊಮ್ಮೆ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಬಹುದು, ಬಿಜೆಪಿಗೆ 150 ಸ್ಥಾನ ಗಳಿಸುವಂತೆ ಪ್ರಯತ್ನಿಸುತ್ತೇನೆ. ಅಧಿವೇಶನ ಮುಗಿದ ಬಳಿಕ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ರಾಜ್ಯದ ಜನತೆಗೆ ನಮನ ಸಲ್ಲಿಸುತ್ತೇನೆ. ರಾಜ್ಯದ ಶಾಸಕರಿಗೆ ಆತ್ಮಸಾಕ್ಷಿ ಮತ ಹಾಕಲು ನಾನು ಕೋರಿದ್ದೂ ನಿಜ. ಅಧಿಕಾರದಲ್ಲಿರಲಿ, ವಿರೋಧ ಪಕ್ಷದಲ್ಲಿರಲಿ, ಕುಮಾರಸ್ವಾಮಿಯವರೇ ಹೋರಾಟ ಮಾಡ್ತೇನೆ. ಜನರಿಗಾಗ ಪ್ರಾಣ ಕೊಡ್ತೇನೆ.ವಿಶ್ವಾಸಮತದ ಪ್ರಸ್ತಾಪ ಮುಂದುವರಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನಕಕ್ಕೆ ರಾಜೀನಾಮೆ ಸಲ್ಲಿಸ್ತೇನೆ.

ಇದು ಶನಿವಾರ ಸಂಜೆ 4 ಗಂಟೆಯಾದ ಬಳಿಕ ಮೇ.17ರಂದು ಬೆಳಗ್ಗೆ 9 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಶನಿವಾರ ವಿಧಾನಸಭೆಯಲ್ಲಿ ಮಾತನಾಡಿದ ರೀತಿ. ಹಾಗೆ ಹೇಳಿದ ಮಾತು ಮುಗಿಸಿದ ಯಡಿಯೂರಪ್ಪ ಎಲ್ಲರಿಗೂ ನಮಸ್ಕಾರ ಹೇಳುತ್ತಾ ರಾಜಭವನಕ್ಕೆ ತೆರಳಿದರೆ, ಇತ್ತ ಭಾವಿ ಮುಖ್ಯಮಂತ್ರಿ ಎಂದೇ ಬಿಂಬಿಸಲಾಗುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರ ಮೊಗದಲ್ಲಿ ಮಂದಹಾಸ ಮೂಡಿತ್ತು. ಬದ್ಧವೈರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅದರಲ್ಲೂ ಡಿ.ಕೆ.ಶಿವಕುಮಾರ್ ಮತ್ತು ಕುಮಾರಸ್ವಾಮಿ ವಿಧಾನಸೌಧದಲ್ಲಿ ವಿಜಯದ ಸಂಕೇತವಾದ ಎರಡು ಬೆರಳುಗಳನ್ನೆತ್ತಿ ಸಂಭ್ರಮಸಿದರೆ, ಉಳಿದ ಕಾಂಗ್ರೆಸ್ ಜೆಡಿಎಸ್ ಶಾಸಕರ ಮುಖದಲ್ಲಿನ ಆತಂಕ ದೂರವಾಗಿತ್ತು. ಬಿಜೆಪಿ ಸದಸ್ಯರು ಮೌನವಾಗಿಯೇ ಯಡಿಯೂರಪ್ಪನವರನ್ನು ಹಿಂಬಾಲಿಸಿದರು.

ಇದರೊಂದಿಗೆ 55 ಗಂಟೆಗಳ ಅಧಿಕಾರ ಅನುಭವಿಸಿದ ಯಡಿಯೂರಪ್ಪ ಹೊರಬಿದ್ದರೆ, ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಸಿದ್ಧತೆ ನಡೆಸುತ್ತಿದ್ದಾರೆ. 2004ರ ಬಳಿಕ ಮತ್ತೊಮ್ಮೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಆದರೆ ಈ ಬಾರಿ ಮುಖ್ಯಮಂತ್ರಿ ಜೆಡಿಎಸ್ ನ ಕುಮಾರಸ್ವಾಮಿ. (ಅಂದು ಧರ್ಮಸಿಂಗ್ ಸಿಎಂ ಆಗಿದ್ದರು)

ಆದರೆ ಮುಂದಿನ ಸರಕಾರ ಅಸ್ತಿತ್ವಕ್ಕೆ ಬರುವವರೆಗೂ ಯಡಿಯೂರಪ್ಪ ಜೋಪಾಸನಾ ಮುಖ್ಯಮಂತ್ರಿಯಾಗಿರುತ್ತಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

4 hours ago