ಕಲ್ಲಡ್ಕ

ಜಗತ್ತಿಗೇ ಮಾದರಿಯಾಗಿ ನಿರ್ಮಾಣವಾಗಲಿದೆ ಗೋಸ್ವರ್ಗ: ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಭಾನ್ಕುಳಿ ಶ್ರೀ ರಾಮದೇವ ಮಠದ ಆವರಣದಲ್ಲಿ ಸಹಸ್ರ ಗೋವುಗಳ ಸಹಜ ಬದುಕಿಗೆ ಗೋಸ್ವರ್ಗ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಅದು ಜಗತ್ತಿಗೇ ಮಾದರಿಯಾಗಬೇಕು ಎಂಬ ಧ್ಯೇಯೋದ್ಧೇಶವನ್ನು ಇರಿಸಿಕೊಳ್ಳಲಾಗಿದೆ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಜನಭವನದಲ್ಲಿ ಏರ್ಪಡಿಸಿದ ಸಮಾರಂಭವೊಂದರಲ್ಲಿ ಗೋಸ್ವರ್ಗ ಯೋಜನೆಗೆ ಮಠದ ಭಕ್ತರ ೧೨ ಲಕ್ಷಕ್ಕೂ ಅಧಿಕ ಮೊತ್ತದ ಸಮರ್ಪಣೆಗಾಗಿ ಅಭಿನಂದಿಸಿ, ಆಶೀರ್ವಚನ ನೀಡಿದರು.

ಗೋವಿಗಾಗಿ ತಪಸ್ಸು ಅನಿವಾರ್ಯ. ಅದೇ ಶ್ರೇಯಸ್ಸು ಮತ್ತು ಮುಂದಿನ ಪೀಳಿಗೆಗೆ ದಾರಿದೀಪವಾಗಲಿದೆ ಎಂದು ಶ್ರೀಗಳು ಈ ಸಂದರ್ಭ ನುಡಿದರು.
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಶ್ರೀಗಳ ಕಾರ್ಯಯೋಜನೆಯನ್ನು ಶ್ಲಾಘಿಸಿದರು. ಶಾಸಕರಾದ ಸಂಜೀವ ಮಠಂದೂರು, ಅಂಗಾರ, ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟಿನ ಅಧ್ಯಕ್ಷ ಯು.ಗಂಗಾಧರ ಭಟ್, ಮಹಾಮಂಡಲ ಅಧ್ಯಕ್ಷೆ ಈಶ್ವರಿ ಶ್ಯಾಮ ಭಟ್ ಬೇರ್ಕಡವು, ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು, ಡಾ.ಗಿರಿಧರ ಕಜೆ ಮತ್ತು ಸಹೋದರರು ಉಪಸ್ಥಿತರಿದ್ದರು. ಧಾರ್ಮಿಕ ಪರಿಷತ್ತಿನ ಸದಸ್ಯ ಜಗನ್ನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಶಿವರಾಮ ಕಜೆ ಮತ್ತು ಶಾರದಾ ಕಜೆ ದಂಪತಿಯನ್ನು ಶ್ರೀಗಳು ಗೌರವಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts