ಪ್ರಮುಖ ಸುದ್ದಿಗಳು

ಬಂಟ್ವಾಳದ ಡಾ. ನವೀನ್ ಭಟ್ ಸೇರಿ 9 ಐಎಎಸ್ ಅಧಿಕಾರಿಗಳು ಕರ್ನಾಟಕ ಸೇವೆಗೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಕಳೆದ ವರ್ಷ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ ಡಾ. ನವೀನ್ ಭಟ್ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿ ನಿಯುಕ್ತಿಗೊಂಡಿದ್ದು, ಮೇ.24ರಂದು ಕರ್ನಾಟಕ ಸರಕಾರದ ಕರ್ತವ್ಯವನ್ನು ಪ್ರೊಬೆಷನರಿ ಆಧಾರದ ಮೇಲೆ ಆರಂಭಿಸಲಿದ್ದಾರೆ.

ಜಾಹೀರಾತು

2017ರ ಬ್ಯಾಚ್ ನ ಒಟ್ಟು 9 ಮಂದಿಯನ್ನು ಕರ್ನಾಟಕದ ಸೇವೆಗೆ ನಿಯುಕ್ತಿಗೊಳಿಸಲಾಗಿದ್ದು, ಮಸ್ಸೂರಿಯಲ್ಲಿ ತರಬೇತಿ ಅವಧಿ ಮುಗಿಸಿದ್ದಾರೆ. ಟಾಪರ್ ಆಗಿರುವ ನಂದಿನಿ ಕೆ.ಆರ್, ಶೇಕ್ ತನ್ವೀರ್ ಆಸಿಫ್, ಡಾ. ನವೀನ್ ಭಟ್ ವೈ, ಅಕ್ಷಯ್ ಶ್ರೀಧರ್, ದಿಲೀಶ್ ಸಶಿ, ನಂದಿನಿದೇವಿ ಕೆ, ಪ್ರಿಯಾಂಗಾ ಎಂ, ಲೋಖಂಡೆ ಸ್ನೇಹಲ್ ಸುಧಾಕರ್ ಮತ್ತು ಭನ್ವಾರ್ ಸಿಂಗ್ ಮೀನಾ ಅವರು ಕರ್ನಾಟಕಕ್ಕೆ ಆಯ್ಕೆಯಾದ ಐಎಎಸ್ ನೂತನ ಅಧಿಕಾರಿಗಳು.

ಮೇ 24ರಂದು ಕರ್ತವ್ಯಕ್ಕೆ ಇವರು ಹಾಜರಾಗಬೇಕಿದ್ದು, ಅಲ್ಲಿಂದ ಮೈಸೂರಿನಲ್ಲಿ ಜುಲೈವರೆಗೆ ತರಬೇತಿ ನೀಡಲಾಗುತ್ತದೆ. ಬಳಿಕ ನಿಯೋಜಿಸಲಾದ ಜಾಗೆಗಳಿಗೆ ಅವರನ್ನು ಪ್ರೊಬೆಷನರಿ ಅಧಿಕಾರಿಗಳನ್ನಾಗಿ ಕಳುಹಿಸಲಾಗುತ್ತದೆ.

ಲೋಕೋಪಯೋಗಿ ಇಲಾಖೆಯ ದಕ್ಷ ಅಧಿಕಾರಿ, ಬಂಟ್ವಾಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಉಮೇಶ್ ಭಟ್ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ ಡಾ. ನವೀನ್ ಭಟ್ ರಾಷ್ಟ್ರದ ಅತ್ಯುನ್ನತ ಸೇವೆಗಳಲ್ಲೊಂದಾದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ೩೭ನೇ ರ್‍ಯಾಂಕ್ ಗಳಿಸಿ ರಾಜ್ಯಕ್ಕೇ ಮೂರನೇಯವರಾಗಿ ಹೊರಹೊಮ್ಮಿದ್ದರು.

ಜಾಹೀರಾತು

ಪ್ರಾಥಮಿಕ ವಿದ್ಯಾಭ್ಯಾಸವನ್ನು ಮೂಡುಬಿದರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಬಂಟ್ವಾಳ ಬಿ.ಸಿ.ರೋಡಿನ ಮೊಡಂಕಾಪುವಿನಲ್ಲಿರುವ ಇನ್‌ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೈಸ್ಕೂಲ್ ಹಾಗೂ ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ವಿದ್ಯಾಭ್ಯಾಸ ಪಡೆದಿರುವ ನವೀನ್ ಎಂಬಿಬಿಎಸ್ ಪದವೀಧರರಾದರೆ, ಅವರ ಸಹೋದರಿ ನವ್ಯಾ ಎಂಬಿಬಿಎಸ್ ಕಲಿಯುತ್ತಿದ್ದಾರೆ.
೨೦೦೯ರಲ್ಲಿ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ನವೀನ್, ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಪೂರೈಸಿದರು. ಬಳಿಕ ಐಎಎಸ್ ಪರೀಕ್ಷೆ ಬರೆಯುವ ಹಂಬಲದಿಂದ ಚೆನ್ನೈನ ಶಂಕರ್ ಕೋಚಿಂಗ್ ಗೆ ಸೇರಿ ಅಲ್ಲಿ ಆರು ತಿಂಗಳ ತರಬೇತಿ, ಅದಾದ ಬಳಿಕ ಸ್ನೇಹಿತರೊಂದಿಗೆ ಬೆಂಗಳೂರಿನಲ್ಲಿ ಸಿವಿಲ್ ಸರ್ವೀಸ್ ಪರೀಕ್ಷೆಗಾಗಿ ಓದು. ೨೦೧೭ರ ಸಿವಿಲ್ ಸರ್ವೀಸ್ ಫಲಿತಾಂಶ ಮೇ.೩೧ರಂದು ಪ್ರಕಟಗೊಂಡಾಗ ಅವರು ರಾಷ್ಟ್ರಮಟ್ಟದಲ್ಲಿ 37ನೇ ಸ್ಥಾನ ಗಳಿಸಿದ್ದರು. ಮೂಲತ: ಉಡುಪಿ ಜಿಲ್ಲೆಯ ಎಲ್ಲೂರಿನವರಾದ ಭಟ್ ಕುಟುಂಬದ ಜೊತೆಗೆ ಇಡೀ ಬಂಟ್ವಾಳಕ್ಕೆ ನವೀನ್ ಕೀರ್ತಿ ತಂದವರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ