ಜಿಲ್ಲಾ ಸುದ್ದಿ

ನಿಫಾ ವೈರಸ್ – ಮಂಗಳೂರಲ್ಲಿ ಇದುವರೆಗೂ ಯಾರೂ ರೋಗಬಾಧಿತರಲ್ಲ

ಕೃಪೆ: ಇಂಟರ್ ನೆಟ್

ಮಂಗಳೂರಿನ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ತಲಾ ಒಬ್ಬ ರೋಗಿಯ ಗಂಟಲು ದ್ರವದ ಮಾದರಿಯನ್ನು ಮಣಿಪಾಲ ಪ್ರಯೋಗಾಲಕ್ಕೆ ನಿಫಾ ಶಂಕೆಯಲ್ಲಿ ಕಳುಹಿಸಲಾಗಿದ್ದರೂ ಇದುವರೆಗೂ ಯಾರೂ ಈ ಸೋಂಕಿನಿಂದ ರೋಗಬಾಧಿತರಿಲ್ಲ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದುವರೆಗೂ ಜಿಲ್ಲೆಯಲ್ಲಿ ನಿಫಾ ಪ್ರಕರಣ ದೃಢಪಟ್ಟಿಲ್ಲ ಎಂದು ಡಾ.ರಾಮಕೃಷ್ಣರಾವ್‌ ಹೇಳಿದ್ದಾರೆ. ಅವರ ರಕ್ತದ ಮಾದರಿಯಲ್ಲಿ ಪಾಸಿಟೀವ್ ಬಂದರೆ ಪುಣೆಯ ಪ್ರಯೋಗಾಲಯಕ್ಕೆ ಮಾದರಿ ರವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಜಾಹೀರಾತು

ನಿಫಾ ಸೋಂಕು ನಮ್ಮನ್ನು ಆವರಿಸಿದರೆ, ಮೊದಲಿಗೆ ಅದು ಮೆದುಳಿನ ಮೇಲೆ ತನ್ನ ದುಷ್ಪರಿಣಾಮ ಬೀರುತ್ತದೆ. ಆರಂಭಲ್ಲಿ ಮೆದುಳಿನ ನರಮಂಡಲದ ಮೇಲೆ ದಾಳಿ ಮಾಡುವ ವೈರಾಣು ಪತ್ತೆಯಾಗಲು 5ರಿಂದ 14 ದಿನಗಳೇ ಬೇಕಾಗುತ್ತದೆ. ಸಾಮಾನ್ಯ ಜ್ವರ, ವಿಪರೀತ ತಲೆನೋವು, ಅತಿಯಾದ ಆಯಾಸ, ಅತಿಯಾದ ನಿದ್ರಾಹೀನತೆ, ದಿಗ್ಭ್ರಮೆ ಮತ್ತು ಮಾನಸಿಕ ಗೊಂದಲ ಸೋಂಕಿನ ಲಕ್ಷಣಗಳಾಗಿವೆ. ಕೆಲ ಪ್ರಕರಣಗಳಲ್ಲಿ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿದೆ ಏನೇ ಇದ್ದರೂ ಸ್ಥಳೀಯ ವೈದ್ಯರನ್ನು ಯಾವುದೇ ಜ್ವರ, ಲಕ್ಷಣಗಳು ಕಂಡುಬಂದರೆ ಸಂಪರ್ಕಿಸಿ ಸಲಹೆ ಪಡೆಯುವುದು ಅತ್ಯುತ್ತಮ ಮಾರ್ಗ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ