ವಾಮದಪದವು

ಗೆಲುವು ಕಾರ್ಯಕರ್ತರಿಗೆ ಅರ್ಪಣೆ: ಕೃತಜ್ಞತಾ ಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳದ ನೂತನ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾಲೂಕಿನ ಸಿದ್ದಕಟ್ಟೆಯಲ್ಲಿ ಕಾರ್ಯಕರ್ತರಿಗೆ ಕೃತಜ್ಞತಾ ಸಲ್ಲಿಕೆಯ ಸಭೆಯಲ್ಲಿ ಮಂಗಳವಾರ ಭಾಗವಹಿಸಿದರು. ಈ ಸಂದರ್ಭ ಮಾತನಾಡಿದ ಅವರು ಈ ವಿಜಯವನ್ನು ಕಾರ್ಯಕರ್ತರಗೆ ಅರ್ಪಿಸುತ್ತೇನೆ ಎಂದು ಹೇಳಿದರು.

ಜಾಹೀರಾತು

ಕ್ಷೇತ್ರದ ಪ್ರತಿನಿಧಿಯಾಗಿ ಕ್ಷೇತ್ರದ ಉತ್ತಮ ಕೆಲಸದೊಂದಿಗೆ ಧರ್ಮದ, ಸಂಸ್ಕೃತಿಯ ರಕ್ಷಣೆ, ಕ್ಷೇತ್ರದ ಜನರ ರಕ್ಷಣೆಯ ಹೊಣೆಗಾರಿಕೆ ನನ್ನಲ್ಲಿದೆ. ಗೆಲುವಿಗೆ ಕಾರ್ಯಕರ್ತರ ಅವಿರತ ಶ್ರಮವೇ ಕಾರಣ. ಹಿಂದೆ ಇದ್ದಂತೆ ಇನ್ನು ಮುಂದೆಯೂ ನಾನು ಕಾರ್ಯಕರ್ತರ ನಡುವೆ ಇರುತ್ತೇನೆ ಎಂದು ಅವರು ಹೇಳಿದರು.

2013 ರ ವಿಧಾನ ಸಭೆಯ ಸೋಲನ್ನು ಸವಾಲಾಗಿ ಸ್ವೀಕರಿಸಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಕ್ಷೇತ್ರದಲ್ಲಿ ನಿರಂತರ ಸಂಚರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಕಾರಣ ಗೆಲುವು ಸಾಧ್ಯವಾಯಿತು ಎಂದು ಕ್ಷೇತ್ರದ ಅಧ್ಯಕ್ಷ ದೇವದಾಸ ಶೆಟ್ಟಿ, ಹೇಳಿದರು.

ಜಾಹೀರಾತು

ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಪ್ರಮುಖರಾದ ರಮಾನಾಥ ರಾಯಿ, ಸತೀಶ್ ಪೂಜಾರಿ, ವಸಂತ ಅಣ್ಣಳಿಕೆ, ಹರೀಶ್ ಅಚಾರ್ಯ, ನಂದಕುಮಾರ್ ರೈ, ಗುಲಾಬಿ ಶೆಟ್ಟಿ, ದಯಾನಂದ ಸಪಲ್ಯ, ರಾಜೇಶ್ ಶೆಟ್ಟಿ, ನಾಗೇಶ್ ಮಾನಾಯಿ, ಸಂತೋಷ ರಾಯಿಬೆಟ್ಟು. ರತ್ನ ಕುಮಾರ್ ಚೌಟ ಸ್ವಾಗತಿಸಿದರು. ಎಸ್.ಪಿ.ಶ್ರೀಧರ ವಂದಿಸಿದರು. ಪಕ್ಷದ ಪ್ರಮುಖ ಪ್ರಭಾಕರ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ನೂತನ ಶಾಸಕರನ್ನು ಅಭಿನಂದಿಸಲಾಯಿತು. ಸ್ಥಳೀಯ ಸಮಸ್ಯೆಗಳ ಅಹವಾಲು ನೀಡಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ