ನೂತನ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಾಲೂಕಿನ ವೀರಕಂಭದ ಅರೆಬೆಟ್ಟು ಎಂಬಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡರು.
ಬಳಿಕ ಮಾತನಾಡಿದ ಅವರು ಬಿಜೆಪಿ ಬಂಟ್ವಾಳ ಕ್ಷೇತ್ರದಲ್ಲಿ ಜಯಗಳಿಸಿರುವುದರ ಹಿಂದೆ ಕಾರ್ಯಕರ್ತರ ಶ್ರಮ ಅಡಗಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಎಸ್.ಸಿ ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಕ್ಷೇತ್ರ ಕಾರ್ಯದರ್ಶಿ ಸೀಮಾ ಮಾಧವ, ಕ್ಷೇತ್ರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಂತಿ, ರತ್ನಕರ ಭಂಡಾರಿ, ಸಂದೇಶ್ ಕುಮಾರ್, ರಮೇಶ್ ಕೇಪುಲಕೋಡಿ, ರಾಮಚಂದ್ರ ಪೂಜಾರಿ, ಮಹಾಲಿಂಗ ರೈ, ಜಯಪ್ರಕಾಶ್ ತೆಕ್ಕಿಬಾಬು ಉಪಸಿತ್ಥರಿದ್ದರು.
ಚಂದ್ರಶೇಖರ ಬಂಗೇರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಪಾದೆ ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…