ಬಂಟ್ವಾಳ

ತುಂಬೆ ಕುಲಾಲ ಸೇವಾ ಸಂಘ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ತುಂಬೆ ಇದರ 4ನೇ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ತುಂಬೆ ರಾಮನಗರ (ರಾಮಲ್ ಕಟ್ಟೆ) ಶಾರದಾ ಸಭಾ ಭವನದಲ್ಲಿ ನಡೆಯಿತು.

ಜಾಹೀರಾತು

ಸಂಘದ ಅಧ್ಯಕ್ಷರಾದ ಲಿಂಗಪ್ಪ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ಜೀವಾವಿಮಾ ನಿಗಮ ಕಾರ್ಕಳ ಶಾಖೆಯ ಉಪಶಾಖಾಧಿಕಾರಿ ಸೋಮಸುಂದರ್ ಕೆ. ಮಾತನಾಡುತ್ತಾ ನಾವು ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಮಾಡುವುದರ ಜೊತೆಗೆ ನಮ್ಮ ಸಂಸ್ಕೃತಿ , ನಡೆನುಡಿಯನ್ನು ಪಾಲಿಸುವಂತೆ ಪ್ರೇರೇಪಿಸಬೇಕು ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಯಲಕ್ಷ್ಮೀ.ಎಸ್.ಬಂಗೇರ ಸಂಘದವರು ಉಚಿತವಾಗಿ ನೀಡಿದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.

ಸಿಆರ್‌ಪಿಎಫ್ ನಿವೃತ್ತ ಯೋಧ ಓ.ಆರ್.ಮಾಯಿಲಪ್ಪ ಸಂಪಾಜೆ, ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಬೆಂಗಳೂರು ದ.ಕ.ಜಿಲ್ಲೆ ಇದರ ಉಪಾಧ್ಯಕ್ಷರಾದ ಶೇಷಪ್ಪ ಮಾಸ್ತರ್, ಸಂಘದ ಗೌರವಾಧ್ಯಕ್ಷ ನೀಲಪ್ಪ ಸಾಲಿಯಾನ್ ಉಪಸ್ಥಿತರಿದ್ದರು. ಸಂದೀಪ್ ಕುಲಾಲ್ ವರದಿ ವಾಚಿಸಿದರು. ಖಜಾಂಚಿ ಹರೀಶ್ ಪೆರ್ಲಬೈಲು ಸ್ವಾಗತಿಸಿದರು. ಕಾರ್ಯದರ್ಶಿ ಭಾಸ್ಕರ್ ಕುಲಾಲ್ ವಂದಿಸಿದರು. ಭಾರತಿ ಶೇಷಪ್ಪ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸಂಘದ ಮಹಿಳಾ ಘಟಕವನ್ನು ಸ್ಥಾಪಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ