ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ಪರಿಹಾರಕ್ಕೆ ಸೂಚನೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಮುಂಬದಿಯು ಮಳೆಯಿಂದ ಭೂ ಕುಸಿತಕ್ಕೆ ಒಳಗಾಗಿದ್ದು ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ಪರಿಶೀಲನೆ ಮಾಡಿದರು. ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು, ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ, ಪಕ್ಷ ಪ್ರಮುಖರಾದ ಪುರುಷೋತ್ತಮ , ರಾಮ್‌ದಾಸ್ ಬಂಟ್ವಾಳ, ತಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಸದಸ್ಯ ಪ್ರಭಾಕರ ಪ್ರಭು ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕಿನಾದ್ಯಂತ ಮಂಗಳವಾರ ಸುರಿದ ಮಳೆಗೆ ವ್ಯಾಪಕ ಹಾನಿಯಾಗಿದ್ದು, ಅವುಗಳಲ್ಲಿ ನರಿಕೊಂಬು, ಆಲಾಡಿ, ಮಾರ್ನಬೈಲು, ಮಂಚಿ ಪ್ರದೇಶಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬುಧವಾರ ಭೇಟಿ ನೀಡಿದರು.

ಜಾಹೀರಾತು

ಸ್ಥಳದಿಂದಲೇ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನರಿಕೊಂಬು ಗ್ರಾಮದಲ್ಲಿ ವಿಶ್ವನಾಥ ಹಾಗೂ ಬಾಬು ಎಂಬವರ ಮನೆ ಗೋಡೆ ಕುಸಿದು ಹಾನಿಯಾಗಿದ್ದರೆ, ಎರಿಮಲೆ ಕಾಡೆದಿ ದೇವಸ್ಥಾನದ ಮುಂಭಾಗದಲ್ಲಿ ಮಣ್ಣು ಕುಸಿದಿದ್ದು,ಈ ಬಗ್ಗೆ ನಷ್ಟದ ಕುರಿತು ಅಂದಾಜಿಸುವಂತೆ ಸೂಚಿಸಿದರು.

ಮಂಗಳೂರಿಗೆ ಕುಡಿಯುವ ನೀರು ಪೂರೈಕೆಗಾಗಿ ತುಂಬೆ ವೆಂಟೆಡ್ ಡ್ಯಾಂ ನಲ್ಲಿ ನೀರು ಸಂಗ್ರಹಕ್ಕೆ ಆರು ಮೀಟರ್ ಗೆ ಹಾಕಲಾದ ಹಲಗೆಯನ್ನುತೆರವುಗೊಳಿಸದಿರುವುದರಿಂದ ಸಂಬಾರಗುರಿ ಪ್ರದೇಶದಲ್ಲಿ ತೋಟಗಳಿಗೆ ನೀರು ನುಗ್ಗಿ ಮುಳುಗಡೆಯಾಗಿದ್ದು, ಅಡಕೆ ತೋಟಕ್ಕೆ ಅಪಾರ ನಷ್ಟ ವುಂಟಾಗುವ ಆತಂಕ ಕೃಷಿಕರನ್ನು ಕಾಡಿದೆ. ಇದನ್ನು ಪರಿಶೀಲಿಸಿದ ಶಾಸಕ  ತಾಲೂಕು ತೋಟಗಾರಿಕಾ ಇಲಾಖಾಧಿಕಾರಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ನಷ್ಟದ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದರು. ಸಜೀಪ ಮುನ್ನೂರುಗ್ರಾಮದ ಅಲಾಡಿ ಜುಮಾದಿ ದೈವಸ್ಥಾನದ ತಡೆಗೋಡೆ ಸಂಪೂರ್ಣ ಕುಸಿದಿದ್ದು, ನಷ್ಟದ ಬಗ್ಗೆ ಅಂದಾಜಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.

ಮಳೆಗೆ ಕುಸಿದ ಸೇತುವೆ
ಮಂಗಳವಾರ ಸುರಿದ ಮಳೆಗೆ ಮಂಚಿ ಗ್ರಾಮದ ನೂಜಿ ಆಲಬೆಯಲ್ಲಿ ಕಾಲು ಸೇತುವೆಯೊಂದು ಮುರಿದು ಬಿದ್ದಿದೆ. ಇದರಿಂದ ಈ ಭಾಗದ ಸಂಪರ್ಕಕ್ಕೆ ಸಮಸ್ಯೆ ಉಂಟಾಗಿದೆ. ಇದನ್ನು ಪರಿಶೀಲಿಸಿದ ಶಾಸಕರು, ಶೀಘ್ರದಲ್ಲಿ ಸೇತುವೆಯನ್ನು ಪುನರ್ ನಿರ್ಮಿಸಿಕೊಡುವ ಭರವಸೆಯನ್ನು ಗ್ರಾಮಸ್ಥರಿಗೆ ನೀಡಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಭಾಗದ ಸಂಪರ್ಕ ಕೊಂಡಿ ಕಳಚಿ ಬಿದ್ದಿದೆ. ಇನ್ನೂ ಭಾರಿ ಮಳೆಯಾದರೆ ಆ ಭಾಗದ ಜನರಿಗೆ ಇತ್ತ ಕಡೆಗೆ ಬರಲು ಸಾಧ್ಯವಾಗದೇ ದ್ವೀಪದಲ್ಲಿ ಬದುಕುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ಆದಷ್ಟು ಬೇಗ ಈ ಸೇತುವೆ ಪುನರ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕರ ಜೊತೆಗೆ ತಾಪಂ ಸದಸ್ಯ ಪ್ರಭಾಕರ ಪ್ರಭು,ಕ್ಷೇತ್ರ ಬಿಜೆಪಿ ಸಮಿತಿ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ್, ಎಪಿಎಂಸಿ ಸದಸ್ಯ ಪುರುಷೋತ್ತಮ ಶೆಟ್ಟಿ, ಪ್ರಮುಖರಾದ ಗಣೇಶ್ ರೈ ಮಾಣಿ, ರಮಾನಾಥ ರಾಯಿ, ದಿನೇಶ್ ಅಮ್ಟೂರು, ನರಿಕೊಂಬು ಪಂಚಾಯತ್ ಅಧ್ಯಕ್ಷ ಯಶೋಧರ ಕರ್ಬೆಟ್ಟು,ಮಾಜಿ ತಾಪಂ ಸದಸ್ಯ ಆನಂದ ಶಂಭೂರು,ಪುರುಷೋತ್ತಮ ಟೈಲರ್ ,ಪ್ರವೀಣ ಗಟ್ಟಿ,ಅರವಿಂದ ಭಟ್, ರಮೇಶ್ ರಾವ್ ಸಂತೋಷ ಗುಂಡಿಮಜಲು ಮೊದಲಾದವರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ಪರಿಹಾರಕ್ಕೆ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*