ಬಂಟ್ವಾಳ

ವಿದ್ಯುತ್ ಸಮಸ್ಯೆ ಬಗೆಹರಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ವಿದ್ಯುತ್  ಪೂರೈಕೆ ಸ್ಥಗಿತದ ಸನ್ನಿವೇಶಗಳು ಉಂಟಾಗುತ್ತಿದ್ದು, ಇದನ್ನು ಬಗೆಹರಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚಿಸಿದ್ದಾರೆ.

ಜಾಹೀರಾತು

ಮಳೆಗೆ ಸಂಬಂಧಿಸಿದಂತೆ ಅವರು ಹಾನಿ ಪ್ರದೇಶಗಳನ್ನು ವೀಕ್ಷಿಸಿದ ಬಳಿಕ ಬಿ.ಸಿ.ರೋಡಿನಲ್ಲಿ ಅವರು ಮೆಸ್ಕಾಂ ಮೆಸ್ಕಾಂ ಸುಪರಿಂಟೆಂಡೆಂಟ್ ಇಂಜಿನಿಯರ್ ಮಂಜಪ್ಪ ಅವರೊಂದಿಗೆ ಮಾತನಾಡಿದರು.

ಬಳಿಕ ಅವರು ಬಂಟ್ವಾಳ ವಿಭಾಗ ಕಾರ್ಯಕಾರಿ ಇಂಜಿನಿಯರ್ ಸಂತೋಷ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ ಭಟ್, ಸುನಿಲ್, ಹರೀಶ್, ಪ್ರವೀಣ್ ಜೋಷಿ ಜೊತೆ ಮಾತನಾಡಿ, ಕೇಂದ್ರ ಸರಕಾರದ ಉಚಿತ ವಿದ್ಯುತ್ ಸಂಪರ್ಕ ಯೋಜನೆಯಂತೆ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಿ ಪ್ರಗತಿ ಸಾಧಿಸಲು ಸೂಚನೆ ನೀಡಿದರು.

ಈ ಸಂದರ್ಭ ಪ್ರಮುಖರಾದ ಎ.ಗೋವಿಂದ ಪ್ರಭು, ರಾಮದಾಸ ಬಂಟ್ವಾಳ, ದಿನೇಶ್ ಅಮ್ಟೂರು, ರಮಾನಾಥ ರಾಯಿ, ಸೀತಾರಾಮ ಪುಜಾರಿ, ರೊನಾಲ್ಡ್ ಡಿಸೋಜ, ಪ್ರಭಾಕರ ಪ್ರಭು, ಹರೀಶ ಆಚಾರ್ಯ, ಸಂತೋಷ್ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಆನಂದ ಶಂಭೂರು, ಪುಷ್ಪರಾಜ ಶೆಟ್ಟಿ, ಮನೋಜ್ ಕಳ್ಳಿಗೆ, ಬಾಲಕೃಷ್ಣ ಸೆರ್ಕಳ, ಜೆರಾಲ್ಡ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ