ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಕೊಳ್ನಾಡು ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಾಡಾಜೆ ಎಂಬಲ್ಲಿ ಅಕ್ರಮವಾಗಿ ಪರವಾನಿಗೆ ರಹಿತ ಸುಮಾರು 4 ಲಕ್ಷ ರೂ ಮೌಲ್ಯದ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ವಾಹನ ವನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳನ್ನು ವಶಪಡಿಸಿಕೊಂಡರು.
ಈ ಸಂದರ್ಭ ಚಾಲಕ ಕೊಳ್ನಾಡು ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಯಿತು. ಆರೋಪಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾನೆ. ಕಾರ್ಯಚರಣೆ ಯಲ್ಲಿ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಉಪವಲಯಾರಣ್ಯಾಧಿಕಾರಿ ಪ್ರೀತಂ ಅರಣ್ಯ ರಕ್ಷಕರಾದ ಜಿತೇಶ್ ಪಿ, ದಯಾನಂದ , ವಿನಯಕುಮಾರ್, ಶಿವಲಿಂಗ ಸ್ವಾಮಿ ಭಾಗವಸಿದ್ದರು. ಮುಂದಿನ ತನಿಖೆಯನ್ನು ಉಪಾರಣ್ಯ ಸಂರಕ್ಷಣಾಧಿಕಾರಿ ಡಾ! ಕರಿಕಲನ್ ಅವರ ಮಾರ್ಗದರ್ಶನ ದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರ ಗೌಡ ನಡೆಸುತ್ತಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)