ಬಂಟ್ವಾಳ

ಮರದ ದಿಮ್ಮಿ ಅಕ್ರಮ ಸಾಗಾಟ ಪತ್ತೆ

ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಕೊಳ್ನಾಡು ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಾಡಾಜೆ ಎಂಬಲ್ಲಿ ಅಕ್ರಮವಾಗಿ ಪರವಾನಿಗೆ ರಹಿತ ಸುಮಾರು 4 ಲಕ್ಷ ರೂ ಮೌಲ್ಯದ  ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ವಾಹನ ವನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳನ್ನು ವಶಪಡಿಸಿಕೊಂಡರು.

ಜಾಹೀರಾತು

ಈ ಸಂದರ್ಭ ಚಾಲಕ ಕೊಳ್ನಾಡು ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಯಿತು. ಆರೋಪಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾನೆ. ಕಾರ್ಯಚರಣೆ ಯಲ್ಲಿ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಉಪವಲಯಾರಣ್ಯಾಧಿಕಾರಿ  ಪ್ರೀತಂ ಅರಣ್ಯ ರಕ್ಷಕರಾದ ಜಿತೇಶ್ ಪಿ, ದಯಾನಂದ , ವಿನಯಕುಮಾರ್, ಶಿವಲಿಂಗ ಸ್ವಾಮಿ ಭಾಗವಸಿದ್ದರು. ಮುಂದಿನ ತನಿಖೆಯನ್ನು ಉಪಾರಣ್ಯ ಸಂರಕ್ಷಣಾಧಿಕಾರಿ ಡಾ! ಕರಿಕಲನ್ ಅವರ ಮಾರ್ಗದರ್ಶನ ದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರ ಗೌಡ ನಡೆಸುತ್ತಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.