ಕಲ್ಲಡ್ಕ

ಇತ್ತಿಫಾಕ್ ಮೀಲಾದ್ ಕಮಿಟಿ: ಪುಸ್ತಕ ವಿತರಣೆ

ಜೋಗಿಬೆಟ್ಟು ಇತ್ತಿಫಾಕ್ ಮೀಲಾದ್ ಕಮಿಟಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಗಡಿಯಾರ್ ಜಂಕ್ಷನ್‌ನಲ್ಲಿ ಜರಗಿತು.

ಜಾಹೀರಾತು

ಇತ್ತಿಫಾಕ್ ಮೀಲಾದ್ ಕಮಿಟಿ ಅಧ್ಯಕ್ಷ ಅಬ್ದುಲ್ ರಶೀದ್ ಜೋಗಿಬೆಟ್ಟು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಂಜೆಎಂ ಮಸೀದಿಯ ಖತೀಬ್ ಅಲ್ಹಾಜ್ ಟಿ.ಪಿ. ಜಮಾಲುದ್ದೀನ್ ದಾರಿಮಿ ಅವರು ದುವಾಃ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಂಜೆಎಂ ಮಸೀದಿಯ ಅಧ್ಯಕ್ಷ ಅಬ್ದುಲ್ ಅಝಿಝ್ ಪಾರ್ಪಕಜೆ, ಪ್ರಧಾನ ಕಾರ್ಯದರ್ಶಿ ಪಿ.ಕೆ.ಅಬ್ದುಲ್ ರಹಿಮಾನ್, ಗಡಿಯಾರ ಸರಕಾರಿ ಶಾಲಾ ಅಧ್ಯಾಪಕ ಸದಾನಂದ, ಇತ್ತಿಫಾಕ್ ಮೀಲಾದ್ ಕಮಿಟಿಯ ಗೌರವಾಧ್ಯಕ್ಷ ಹೈದರ್ ವಿದ್ಯಾನಗರ, ಉಪಾಧ್ಯಕ್ಷರಾದ ಯೂಸೂಫ್ ಜೋಗಿಬೆಟ್ಟು, ಅಲ್ತಾಫ್ ವಿದ್ಯಾನಗರ, ಕೋಶಾಧಿಕಾರಿ ಶರೀಫ್ ಕಡೇಶ್ವಾಲ್ಯ, ಜಾಬಿರ್ ಮುಸ್ಲಿಯಾರ್ ಉಪಸ್ಥಿತರಿದ್ದರು.

ಪಿ.ಜೆ.ಅಬ್ದುಲ್ ಅಝೀಝ್ ಜೋಗಿಬೆಟ್ಟು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುಮಾರು 90 ಕ್ಕೂ ಅಧಿಕ ವಿಧ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ