ಬಂಟ್ವಾಳ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಜಾಹೀರಾತು


ವಿಧಾನಸಭೆಯ ಬಂಟ್ವಾಳ ಕ್ಷೇತ್ರದಲ್ಲಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ವಿಜಯದ ಹಿನ್ನೆಲೆಯಲ್ಲಿ ಬಂಟ್ವಾಳ, ಬಿ.ಸಿ.ರೋಡಿನಲ್ಲಿ ವಿಜಯೋತ್ಸವ ಮೆರವಣಿಗೆ ಶನಿವಾರ ಸಂಜೆ ನಡೆಯಿತು.

ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ತೆರದ ವಾಹನದಲ್ಲಿ ಶಾಸಕ ರಾಜೇಶ್ ನಾಯ್ಕ್ ರವರ ಆರಂಭಗೊಂಡ ವಿಜಯೋತ್ಸವ ಮೆರವಣಿಗೆ ಬಿ ಸಿ ರೋಡ್ ರಾಜ ರಸ್ತೆಯಲ್ಲಿ ಸಾಗಿ ಬಂದು, ಗಾಣ ದಪಡ್ಪು. ಬಂಟ್ವಾಳ ನೆರೆ ವಿಮೋಚನ ರಸ್ತೆಯ ಮೂಲಕ ಬಂಟ್ವಾಳ ನಗರವನ್ನು ಪ್ರವೇಶಿಸಿತು.

ತೆರೆದವಾಹನದಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್,ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ ಉಪಸ್ಥಿತರಿದ್ದರು.

ಜಾಹೀರಾತು

ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಸುಗುಣ ಕಿಣಿ, ಭಾಸ್ಕರ ಟೈಲರ್, ಪ್ರಮುಖರಾದ ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ದಿನೇಶ್ ಭಂಡಾರಿ, ದಿನೇಶ್ ಅಮ್ಟೂರು, ರೋನಾಲ್ಡ್ ಡಿಸೋಜ, ಪ್ರಬಾಕರ ಪ್ರಭು, ಗಣೇಶ್ ರೈ ಮಾಣಿ, ಗಂಗಾಧರ್ ಪರಾರಿ, ಮಚ್ಚೇಂದ್ರ ಸಾಲಿಯಾನ್ , ಯಶೋಧ ಕುಲಾಲ್, ಸುಶ್ಮಾ ಚರಣ್, ಸೀಮಾ ಮಾಧವ, ಸೀತರಾಮ ಪೂಜಾರಿ,ರಮಾನಾಥ ರಾಯಿ, ಹರೀಶ್ ಆಚಾರ್ಯ ರಾಯಿ ,ಪುರುಷೋತ್ತಮ ಶೆಟ್ಟಿ ವಾಮದಪದವು, ಶಿವಪ್ತಸಾದ್ ಬಂಟ್ವಾಳ ,ರಮಾನಾಥ ಪೈ ಬಂಟ್ವಾಳ ಮೊದಲಾದವರಿದ್ದರು.  ಗೊಂಬೆ ಕುಣಿತ, ಕೀಲುಕುದುರೆ, ಚೆಂಡೆ, ನಾಸಿಕ್ ಬ್ಯಾಂಡ್, ಕೊಂಬು ಕಹಳೆ ಮೆರವಣಿಗೆಗೆ ಮೆರಗು ನೀಡಿತು .ಮೆರವಣಿಗೆಯುದ್ದಕ್ಕೂ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಹಾರ ಹಾಕಿ ಪೇಟ ತೊಡಿಸಿ ಅಭಿನಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ