ಕಲ್ಲಡ್ಕ

ಮಕ್ಕಳ ಚುನಾವಣೆಗೆ ಎಲೆಕ್ಟ್ರಾನಿಕ್ ಮತಯಂತ್ರ

ಮೊನ್ನೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ್ದೇ ಸುದ್ದಿ. ಅದರ ಬಳಕೆ ಕುರಿತು ಗೊಂದಲ, ಸಂಶಯಗಳು ಬೇರೆ. ಇದನ್ನು ನಿವಾರಿಸಲು ಎಳವೆಯಲ್ಲೇ ಪ್ರಯಯ್ನಿಸಿದರೆ ಹೇಗೆ. ಇಲ್ಲಿದೆ ನೋಡಿ ಈ ಶಾಲೆಯ ಚುನಾವಣೆಯ ವರದಿ.

ಜಾಹೀರಾತು

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ನಾಯಕನ ಸ್ಥಾನಕ್ಕೆ ಚುನಾವಣೆ ನಡೆಯಿತು. 10 ನೇ ತರಗತಿಯ ವಿಜೇತ್.ಕೆ.ಎಂ ನಾಯಕನಾಗಿ ಹಾಗೂ ೯ ನೇ ತರಗತಿಯ ದೀಪಾಲಿ ಎಂ.ಎಸ್. ಉಪನಾಯಕಿಯಾಗಿ ಬಹುಮತದಿಂದ ಆಯ್ಕೆಗೊಂಡರು.

ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಾಯೋಗಿಕ ಅರಿವು ಮೂಡಿಸುವ ಹಿನ್ನಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಸಿಕೊಂಡು ವಿದ್ಯಾರ್ಥಿ ನಾಯಕರ ಆಯ್ಕೆಗೆ ಚುನಾವಣೆ ನಡೆಸಲಾಯಿತು.

ಮತಯಂತ್ರದ ಬಳಕೆ, ಅಭ್ಯರ್ಥಿಗಳಿಗೆ ಚಿಹ್ನೆ ನೀಡಿಕೆ , ಚುನಾವಣಾ ಅಧಿಕಾರಿಗಳ ವಿಶೇಷ ನಿಗಾ ವ್ಯವಸ್ಥೆ, ಮತಗಟ್ಟೆ ಅಧಿಕಾರಿಗಳು , ಮೇಲ್ವಿಚಾರಕರು , ಮತದಾರರಿಂದ ಮತದಾನ , ಮತಎಣಿಕೆ , ವಿಜೇತ ಅಭ್ಯರ್ಥಿಗಳ ಘೋಷಣೆ, ಹೀಗೆ ಎಲ್ಲವೂ ಶಿಸ್ತುಬದ್ಧವಾಗಿ ನಡೆಯಿತು. ಮುಖ್ಯ ಚುನಾವಣಾಧಿಕಾರಿಯಾಗಿ ಸಿ.ಶ್ರೀಧರ್ , ಚುನಾವಣಾ ಅಧಿಕಾರಿಗಳಾಗಿ ವಿಜಯಲಕ್ಷ್ಮೀ .ವಿ.ಶೆಟ್ಟಿ , ಹಾಗೂ ಗ್ರೇಸ್.ಪಿ.ಸಲ್ಡಾನಾ ಕಾರ್ಯ ನಿರ್ವಹಿಸಿದರು.

ಮತಗಟ್ಟೆ ಅಧಿಕಾರಿಗಳಾಗಿ ಶಿಕ್ಷಕಿಯರಾದ ಯಜ್ಞೇಶ್ವರಿ ಎಸ್.ಶೆಟ್ಟಿ, ಮಂಜುಳಾ ಎಚ್.ಗೌಡ, ಶುಭಾ ಕೆ , ರಶ್ಮಿ ಫೆರ್ನಾಂಡಿಸ್, ಲೀಲಾ , ಆಶಾಲತಾ ಹಾಗೂ ಹರಿಣಾಕ್ಷಿ ಕಾರ್ಯ ನಿರ್ವಹಿಸಿದರು. ಸಂಚಾಲಕ ಜೆ.ಪ್ರಹ್ಲಾದ್ ಶೆಟ್ಟಿ ಮಾರ್ಗದರ್ಶನ ನೀಡಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.