www.bantwalnews.com
ವಿಶ್ವ ಪರಿಸರ ದಿನಾಚರಣೆ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಿಲಿಮೊಗರು, ದಂಡೆಗೋಳಿ ಎಂಬಲ್ಲಿ ಜೂನ್ 5ರಂದು ನಡೆಯಿತು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್ ಫರ್ನಾಂಡೀಸ್, ವಲಯ ಅರಣ್ಯಾಧಿಕಾರಿ ಸುರೇಶ್ ಬಿ, ಉಪವಲಯ ಅರಣ್ಯಾಧಿಕಾರಿ ಅನಿಲ್, ಅರಣ್ಯ ರಕ್ಷಕಿ ಸ್ಮಿತಾ, ಅರಣ್ಯ ರಕ್ಷಕ ಮನೋಜ್, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ನಾಯ್ಕ್, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರವೀಂದ್ರ ಆಚಾರ್ಯ, ವಾಮದಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಹರೀಶ ಗಟ್ಟಿ, ಮತ್ತಿತರರು ಉಪಸ್ಥಿತರಿದ್ದರು.