ಅಡ್ಯನಡ್ಕ : ಪರಿಸರ ದಿನಾಚರಣೆ, ವಿವಿಧ ಸಂಘಗಳ ಉದ್ಘಾಟನೆ

www.bantwalnews.com

ಜಾಹೀರಾತು

ಅಡ್ಯನಡ್ಕ ಜನತಾ ಪ್ರೌಢಶಾಲೆಯ ‘ಶ್ಯಾಮಲಾ ಇಕೋ ಕ್ಲಬ್’ ಮತ್ತು ಜನತಾ ಪ.ಪೂ.ಕಾಲೇಜಿನ ‘ವನಸಿರಿ ಇಕೋ ಕ್ಲಬ್’ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಜೂ.5ರಂದು ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪುತ್ತೂರು ಸಂತ ಫಿಲೋಮಿನಾ ಪದವಿ ಕಾಲೇಜಿನ ಸಸ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಪ್ರಸನ್ನ ರೈ ಅವರು ಉಪನ್ಯಾಸ ನೀಡಿ, ಪರಿಸರವು ನಮಗೆ ನಾಯಕತ್ವದ ಹೊಣೆ ಮತ್ತು ಕರ್ತವ್ಯವನ್ನು ವಹಿಸಿಕೊಟ್ಟಿದೆ. ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು  ನಿರ್ವಹಿಸುತ್ತಲೇ ಪರಿಸರ ಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು. ಭೌಗೋಳಿಕ ಪರಿಸರದ ಸ್ವಾಸ್ಥ್ಯ ಮತ್ತು ಸಮತೋಲನ ನಿಭಾಯಿಸುವಲ್ಲಿ ಎಚ್ಚರ ಹಾಗೂ ಕಳಕಳಿ ಹೊಂದಿರಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಜನತಾ ಪ.ಪೂ.ಕಾಲೇಜಿನ ಇಕೋ ಕ್ಲಬ್ ಮತ್ತು ಸಾಹಿತ್ಯ ಸಂಘ ಅಲ್ಲದೆ ಜನತಾ ಪ್ರೌಢಶಾಲೆಯ ಇಕೋ ಕ್ಲಬ್, ಸಾಹಿತ್ಯ ಸಂಘ, ವಿಜ್ಞಾನ ಸಂಘ, ಸಮಾಜ ವಿಜ್ಞಾನ ಸಂಘ, ಕ್ರೀಡಾ ಸಂಘ ಮತ್ತು ಗ್ರಾಹಕ ಸಂಘ ಇವುಗಳನ್ನು ಉದ್ಘಾಟಿಸಿದರು.

ಜಾಹೀರಾತು

ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾಗತಿಕ ತಾಪಮಾನ ಏರಿಕೆ ಮತ್ತು ಪಾರಿಸರಿಕ ಪ್ರದೂಷಣೆಯಿಂದಾಗಿ ಜೀವಜಗತ್ತಿನ  ಒಂದು ಭಾಗ ಅಳಿವಿನ ಸನ್ನಾಹದಲ್ಲಿದೆ. ಆದುದರಿಂದ ನಾವು ಇಂದು ಪರಿಸರ ಸಂರಕ್ಷಣೆಯ ಪಣತೊಡಬೇಕು ಎಂದರು.

ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರ್, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್ ನಾಯ್ಕ್ ಹಾಗೂ ಜನತಾ ಪ. ಪೂ.ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಮಾತನಾಡಿದರು. ಜೀವಶಾಸ್ತ್ರ ಉಪನ್ಯಾಸಕ ಹಾಗೂ ಇಕೋ ಕ್ಲಬ್ ಸಂಘಟಕ ರವಿಕುಮಾರ್ ಆರ್.ಎಸ್. ಅತಿಥಿಗಳನ್ನು ಪರಿಚಯಿಸಿದರು. ಶ್ಯಾಮಲ ಇಕೋ ಕ್ಲಬ್ ಮಾರ್ಗದರ್ಶಕ ಶಿಕ್ಷಕಿ ಕುಸುಮಾವತಿ ಮಾರ್ಗದರ್ಶನ ನೀಡಿದರು. ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಅನಿತಾ ಬಿ. ಸಹಕರಿಸಿದರು.

ಪರಿಸರ ದಿನದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಪರಿಸರ ಗೀತೆ, ಭಾಷಣ, ಸಮೂಹಗಾನ ನಡೆಸಿಕೊಟ್ಟರು. ಧನಂಜಯ ಸ್ವಾಗತಿಸಿ, ಚರಣ್ ರಾಜ್ ರೈ ವಂದಿಸಿದರು. ಕೃಷ್ಣ ಶರ್ಮ ಹಾಗೂ ಲಿಶ್ಮಿತ ಡಿಸೋಜ ನಿರೂಪಿಸಿದರು.

ಜಾಹೀರಾತು

ಅಪರಾಹ್ನ ಸಂಸ್ಥೆಯ ವಠಾರದಲ್ಲಿ ವಿದ್ಯಾರ್ಥಿಗಳಿಂದ ಶಾಲಾ ವನ ಮತ್ತು ಕೈತೋಟ ನಿರ್ಮಾಣ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಡ್ಯನಡ್ಕ : ಪರಿಸರ ದಿನಾಚರಣೆ, ವಿವಿಧ ಸಂಘಗಳ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*