ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ , ತಾ.ಪಂಚಾಯತ್, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಬಿ.ಸಿ.ರೋಡ್ ಅನ್ನಪೂರ್ಣೇಶ್ವರೀ ದೇವಸ್ಥಾನ ಸಭಾಂಗಣದಲ್ಲಿ ಕಾನೂನು ಮಾಹಿತಿ ಕಾರ್ಯಾಗಾರದ ಉದ್ಘಾಟನೆಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್. ನೆರವೇರಿಸಿದರು.
ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಆಶಾಮಣಿ ಡಿ.ರೈ ಮಹಿಳಾ ದೌರ್ಜನ್ಯ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.
ನಗರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್, ದ.ಕ.ಕೇಂದ್ರ ಸರಕಾರಿ ವಕೀಲರಾದ ಪ್ರಸಾದ್ ಕುಮಾರ್ ರೈ, ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ವೆಂಕಟ್ರಮಣ ಶೆಣೈ, ಶ್ರೀಧರ ಪೈ, ನ್ಯಾಯವಾದಿಗಳಾದ ಸುರೇಶ್ ಕುಮಾರ್ ನಾವೂರು, ಚಂದ್ರಶೇಖರ ಬೈರಿಕಟ್ಟೆ, ತಾ.ಕಾ.ಸೇವೆ ಸಮಿತಿ ಸಿಬ್ಬಂದಿ ನರಸೇಗೌಡ ಉಪಸ್ಥಿತರಿದ್ದರು. ಉಮೇಶ್ ಕುಮಾರ್ ವೈ ಸ್ವಾಗತಿಸಿದರು. ನ್ಯಾಯವಾದಿ ಗಣೇಶ್ ಪೈ ವಂದಿಸಿದರು.