ನಾಳೆ ವಿಧಾನಪರಿಷತ್ತು ಚುನಾವಣೆ, ಬಿಜೆಪಿ – ಕಾಂಗ್ರೆಸ್ ಮಧ್ಯೆ ಬಿಗ್ ಫೈಟ್

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಸ್ಥಾನಗಳಿಗೆ ಚುನಾವಣೆ 8ರಂದು ನಡೆಯಲಿದೆ. ಕ್ಯಾ. ಗಣೇಶ್ ಕಾರ್ಣಿಕ್ (ಹಾಲಿ ಸದಸ್ಯ )ಮತ್ತು ಆಯನೂರು ಮಂಜುನಾಥ  ಕ್ರಮವಾಗಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧೆಗಿಳಿದಿದ್ದು, ಕ್ಷೇತ್ರವನ್ನು ಮತ್ತೆ ಪಕ್ಷಕ್ಕೆ ದೊರಕಿಸಿಕೊಡಲು ಶತಪ್ರಯತ್ನ ಮಾಡುತ್ತಿದ್ದರೆ, ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ಬಿಜೆಪಿಯಿಂದ ಸೆಳಯುವ ಭಾರಿ ಪ್ರಯತ್ನ ಮಾಡುತ್ತಿದೆ.
ಕನಾಟಕ ನೈರುತ್ಯ ಪದವೀಧರ/ಶಿಕ್ಷಕರ ಕ್ಷೇತ್ರದ ದೈವಾರ್ಷಿಕ ಚುನಾವಣೆಗೆ ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಕ್ರಮವಾಗಿ ಪದವೀಧರ ಕ್ಷೇತ್ರಕ್ಕಾಗಿ 23 ಮತಗಟ್ಟೆಗಳು ಮತ್ತು ಶಿಕ್ಷಕರ ಕ್ಷೇತ್ರಕ್ಕಾಗಿ 14 ಮತಗಟ್ಟೆಗಳನ್ನು ಅಳವಡಿಸಲಾಗಿದೆ.
ಪದವೀಧರರ ಕ್ಷೇತ್ರ ಮತಗಟ್ಟೆಗಳು:  
  • ಮುಲ್ಕಿ-ನಗರ ಪಂಚಾಯತ್ ಕಟ್ಟಡ 
  • ಮೂಡಬಿದ್ರೆ-ಪುರಸಭೆ ಕಟ್ಟಡ(2 ಮತಗಟ್ಟೆ), 
  • ಸುರತ್ಕಲ್-ಗೋವಿಂದದಾಸ ಕಾಲೇಜು(2 ಮತಗಟ್ಟೆ), 
  • ಬಜಪೆ-ಪಂಚಾಯತ್ ಕಟ್ಟಡ, 
  • ಗುರುಪುರ- ಸರಕಾರಿ ಪದವಿಪೂರ್ವ ಕಾಲೇಜು,
  • ಹಂಪನಕಟ್ಟೆ-ಯುನಿವರ್ಸಿಟಿ ಕಾಲೇಜು ಮಂಗಳೂರು-(5 ಮತಗಟ್ಟೆಗಳು),
  • ಕೊಣಾಜೆ-ವಿಶ್ವ ಮಂಗಳಾ ಇಂಗ್ಲೀಷ್ ಮೀಡಿಯಂ ಸ್ಕೂಲು, ಕೊಣಾಜೆ, 
  • ಬಬ್ಬುಕಟ್ಟೆ-ದ.ಕ ಜಿಲ್ಲಾ ಪಂಚಾಯತ್ ಹೈಯರ್ ಪ್ರೈಮರಿ ಸ್ಕೂಲ್, 
  • ಬಿ.ಸಿ. ರೋಡ್-ಮಿನಿ ವಿಧಾನ ಸೌಧ ತಾಲೂಕು ಕಟ್ಟಡ,(3 ಮತಗಟ್ಟೆ),
  • ಬೆಳ್ತಂಗಡಿ-ತಾಲೂಕು ಕಚೇರಿ(2 ಮತಗಟ್ಟೆ), 
  • ಪುತ್ತೂರು-ತಾಲೂಕು ಪಂಚಾಯತ್ ಕಚೇರಿ(2 ಮತಗಟ್ಟೆ), 
  • ಸುಳ್ಯ-ತಾಲೂಕು ಕಚೇರಿ, 
  • ಪಂಜ-ನಾಡ ಕಚೇರಿ.
ಶಿಕ್ಷಕರ ಕ್ಷೇತ್ರ ಮತಗಟ್ಟೆಗಳು: 
  • ಮುಲ್ಕಿ-ನಗರ ಪಂಚಾಯತ್,
  • ಮೂಡಬಿದ್ರೆ-ಪುರಸಭೆ ಕಟ್ಟಡ, 
  • ಸುರತ್ಕಲ್-ಗೋವಿಂದದಾಸ ಕಾಲೇಜು, 
  • ಬಜಪೆ-ಪಂಚಾಯತ್ ಕಟ್ಟಡ, 
  • ಗುರುಪುರ-ಸರಕಾರಿ ಪದವಿಪೂರ್ವ ಕಾಲೇಜು,
  •  ಮಂಗಳೂರು-ಯುನಿವರ್ಸಿಟಿ ಕಾಲೇಜು ಮಂಗಳೂರು-(2 ಮತಗಟ್ಟೆಗಳು),
  •  ಕೊಣಾಜೆ-ವಿಶ್ವ ಮಂಗಳಾ ಇಂಗ್ಲೀಷ್ ಮೀಡಿಯಂ ಸ್ಕೂಲು, 
  • ಬಬ್ಬುಕಟ್ಟೆ-ದ.ಕ ಜಿಲ್ಲಾ ಪಂಚಾಯತ್ ಹೈಯರ್ ಪ್ರೈಮರಿ ಸ್ಕೂಲ್, 
  • ಬಿ.ಸಿ. ರೋಡ್-ಸಾಮರ್ಥ್ಯ ಸೌಧ, ತಾಲೂಕು ಪಂಚಾಯತ್ ಕಟ್ಟಡ,
  • ಬೆಳ್ತಂಗಡಿ-ತಾಲೂಕು ಕಚೇರಿ, 
  • ಪುತ್ತೂರು-ತಾಲೂಕು ಪಂಚಾಯತ್ ಕಚೇರಿ, 
  • ಸುಳ್ಯ-ತಾಲೂಕು ಕಚೇರಿ, 
  • ಪಂಜ-ನಾಡ ಕಚೇರಿ.
ಜೂನ್ 8 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕ್ಷೇತ್ರದ ಮತದಾರರ ಪಟ್ಟಿಗಳಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಮತಗಟ್ಟೆಗಳಿಗೆ ತೆರಳಿ ಮತದಾನವನ್ನು ಮಾಡಬಹುದು. ಅಲ್ಲದೆ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದವರು ಅಧಿಕೃತ ದಾಖಲೆಗಳಲ್ಲಿ ಯಾವುದಾದರೊಂದನ್ನು ಪತಗಟ್ಟೆಯಲ್ಲಿ ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.
ನೈರುತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು: ಅರುಣ್ ಕುಮಾರ್-ಜನತಾದಳ(ಜಾತ್ಯಾತೀತ), ಅಯನೂರು ಮಂಜುನಾಥ್-ಭಾರತೀಯ ಜನತಾ ಪಾರ್ಟಿ, ಎಸ್.ಪಿ. ದಿನೇಶ್- ಕಾಂಗ್ರೆಸ್, ಜಿ.ಸಿ. ಪಟೇಲ್-ಸರ್ವ ಜನತಾ ಪಾರ್ಟಿ, ಜಫರುಲ್ಲಾ ಸತ್ತರ್ ಖಾನ್-ಪಕ್ಷೇತರ, ಜಿ.ಎಂ. ಜಯಕುಮಾರ್-ಪಕ್ಷೇತರ, ಬಿ.ಕೆ. ಮಂಜುನಾಥ-ಪಕ್ಷೇತರ.
ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು: ಕ್ಯಾ. ಗಣೇಶ್ ಕಾರ್ಣಿಕ್-ಭಾರತೀಯ ಜನತಾ ಪಾರ್ಟಿ, ಎಸ್.ಎಲ್. ಬೋಜೆಗೌಡ-ಜನತಾದಳ(ಜಾತ್ಯಾತೀತ), ಕೆ.ಕೆ. ಮಂಜುನಾಥ ಕುಮಾರ್ (ಮಾಸ್ಟರ್)- ಕಾಂಗ್ರೆಸ್, ಡಾ: ಅರುಣ್ ಹೊಸಕೊಪ್ಪ-ಪಕ್ಷೇತರ, ಅಲೋಸಿಯಸ್ ಡಿಸೋಜ-ಪಕ್ಷೇತರ, ಕೆ.ಬಿ. ಚಂದ್ರೋಜಿ ರಾವ್-ಪಕ್ಷೇತರ, ಡಿ.ಕೆ. ತುಳಸಪ್ಪ-ಪಕ್ಷೇತರ, ಅಂಪಾರ ನಿತ್ಯಾನಂದ ಶೆಟ್ಟಿ-ಪಕ್ಷೇತರ, ಪ್ರಭುಲಿಂಗ ಬಿ.ಆರ್.-ಪಕ್ಷೇತರ, ಬಸವರಾಜಪ್ಪ ಕೆ.ಸಿ. – ಪಕ್ಷೇತರ, ಎಂ. ರಮೇಶ-ಪಕ್ಷೇತರ, ರಾಜೇಂದ್ರ ಕುಮಾರ್ ಕೆ.ಪಿ. -ಪಕ್ಷೇತರ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಾಳೆ ವಿಧಾನಪರಿಷತ್ತು ಚುನಾವಣೆ, ಬಿಜೆಪಿ – ಕಾಂಗ್ರೆಸ್ ಮಧ್ಯೆ ಬಿಗ್ ಫೈಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*