ವಿಧಾನಪರಿಷತ್ತು ಚುನಾವಣೆ ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಇಡೀ ದಿನ ಮಳೆ ಸುರಿದು ವಾತಾವರಣವನ್ನು ಥಂಡಿಯಾಗಿಸಿತು. ಬೆಳಗ್ಗೆ ಕೆಲಹೊತ್ತು ಬಿಸಿಲು ಕಂಡುಬಂದದ್ದು ಬಿಟ್ಟರೆ ಇಡೀ ಬಂಟ್ವಾಳ ತಾಲೂಕಿನಲ್ಲಿ ಮಳೆಯದ್ದೇ ಕಾರುಬಾರು.
ತಾಲೂಕು ಆಡಳಿತ ಮುನ್ನೆಚ್ಚರಿಕೆ ವಹಿಸಿದ್ದು, ಎಲ್ಲಾ ಅಧಿಕಾರಿಗಳನ್ನು ಕರ್ತವ್ಯದ ಕೇಂದ್ರ ಸ್ಥಾನದಲ್ಲಿರುವಂತೆ ಸೂಚಿಸಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಳೆ ನೀರು ಸುಗಮವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ನದಿ ತಟಗಳಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದ್ದು ರಬ್ಬರ ಬೋಟ್ ಗಳನ್ನು ಸಿದ್ದಪಡಿಸಲಾಗಿದೆ. ಈಜುಪಟುಗಳನ್ನು ಗುರುತಿಸಿ ಸಂಪರ್ಕದಲ್ಲಿರಿಸಿಕೊಳ್ಳಲಾಗಿದೆ. ಹಳೆಯ ಮರಗಳು ಹಾಗೂ ಕುಸಿಯುವ ಹಂತದ ಗುಡ್ಡೆಗಳ ಬಗ್ಗೆ ವಿಶೇಷ ಗಮನ ಇರಿಸಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ವೈ.ರವಿ ತಿಳಿಸಿದ್ದಾರೆ.
ಸಜಿಪಪಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿಲ ಇಡಿಪಡ್ಪು ಎಂಬಲ್ಲಿ ಕಿರು ನೀರಾವರಿ ಯೋಜನೆ ಕೊಳವೆ ಬಾವಿಯ ಮತ್ತು ಪಂಪ್ ಹೌಸ್ ಮುಳುಗಿದೆ.
ಮಳೆಯಿಂದ ಏನೇನು ಅನಾಹುತಗಳಾದವು ಇಲ್ಲಿದೆ ವಿವರ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…