ಬಂಟ್ವಾಳ

ಕಾನತ್ತೂರು ದೈವದ ಮೊರೆ ಹೋದ ರಮಾನಾಥ ರೈ

www.bantwalnews.com

ಜಾಹೀರಾತು

ಶರತ್ ಮಡಿವಾಳ ಹತ್ಯೆಯಲ್ಲಿ ತನ್ನ ಹೆಸರನ್ನು ಬಳಸಿ ಅಪಪ್ರಚಾರ ನಡೆಸಲಾಗಿದೆ, ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವವರನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ಮಾಜಿ ಸಚಿವ  ಬಿ.ರಮಾನಾಥ ರೈ ಅವರು ಕಾರಣಿಕ ಕ್ಷೇತ್ರ ಕಾನತ್ತೂರು ಶ್ರೀ ನಾಲ್ವರ್ ದೈವಂಗಳ್ ಮೊರೆ ಹೋಗಿದ್ದಾರೆ.

ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ದೈವಸ್ಥಾನದ ಪ್ರಮುಖರಲ್ಲಿ ಈ ಕುರಿತು ಅರಿಕೆ ಮಾಡಿಕೊಂಡಿದ್ದಾರೆ. ಶರತ್ ಹತ್ಯೆ ವಿಚಾರದಲ್ಲಿ ವಿನಾಕಾರಣ ನನ್ನ ಹೆಸರನ್ನು ಬಳಸಿ ಅಪಪ್ರಚಾರ ನಡೆಸಲಾಗಿದೆ. ಇದರಿಂದ ಮಾನಸಿಕವಾಗಿ ನನಗೆ ತೀವ್ರ ನೋವಾಗಿದೆ. ನಾನು ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಬೇಕು. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವವರನ್ನು ಕರೆದು ವಿಚಾರಣೆ ನಡೆಸಬೇಕು ಎಂದು ಬಿ.ರಮಾನಾಥ ರೈ ಅರಿಕೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತು ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ್ ಜೈನ್, ಡಿಸಿಸಿ ಉಪಾಧ್ಯಕ್ಷ ಬೇಬಿ ಕುಂದರ್,ಕೆ.ಮಾಯಿಲಪ್ಪ ಸಾಲ್ಯಾನ್, ಸದಾಶಿವ ಬಂಗೇರ ಮೊದಲಾದವರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.